Advertisement

ಸೆ.5ಕ್ಕೆ ಪಿ.ಆರ್‌.ತಿಪ್ಪೇಸ್ವಾಮಿ ಪ್ರಶಸ್ತಿ ಪ್ರದಾನ ಸಮಾರಂಭ

11:26 PM Aug 26, 2019 | Team Udayavani |

ಬೆಂಗಳೂರು: ಪಿ.ಆರ್‌.ತಿಪ್ಪೇಸ್ವಾಮಿ ಪ್ರತಿಷ್ಠಾನದ ಈ ಸಾಲಿನ ಕಲಾ ಪ್ರಶಸ್ತಿ ಪ್ರದಾನ ಸಮಾರಂಭ ಸೆ.5 ರಂದು ಮೈಸೂರಿನಲ್ಲಿ ನಡೆಯಲಿದೆ. ಸಂಜೆ 4.30ಕ್ಕೆ ವಿಜಯನಗರದ 2ನೇ ಹಂತದಲ್ಲಿರುವ ಕಲಾ ನಿಕೇತನ ಸ್ಕೂಲ್‌ ಆಫ್ ಆರ್ಟ್‌ನಲ್ಲಿ ಸಮಾರಂಭ ನಡೆಯಲಿದೆ.

Advertisement

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಮಾಜಿ ಸಚಿವ ಎಚ್‌.ವಿಶ್ವನಾಥ್‌, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌ ಸೇರಿದಂತೆ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದಾವಣಗೆರೆಯ ಹಿರಿಯ ಚಿತ್ರಕಲಾವಿದ ಬಿ.ಆರ್‌.ಕೊರ್ತಿ ಮತ್ತು ಹೊಸಪೇಟೆಯ ಹಿರಿಯ ಜಾನಪದ ಕಲಾವಿದೆ ಮಂಜಮ್ಮ ಜೋಗತಿ ಅವರಿಗೆ ಈ ಸಾಲಿನ ಪಿ.ಆರ್‌.ತಿಪ್ಪೇಸ್ವಾಮಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next