Advertisement

ಬೆಂಬಲಿಗರೊಂದಿಗೆ ಅಧಿಕೃತವಾಗಿ ಬಿಜೆಪಿ ಸೇರಿದ ಪ್ರಭಾಕರ ಚಿಣಿ

08:32 PM Feb 15, 2023 | Team Udayavani |

ಕುಷ್ಟಗಿ: ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ ಸುರಾನಾ ಸಮ್ಮುಖದಲ್ಲಿ ಸಣ್ಣ ನೀರಾವರಿ ಇಲಾಖೆಯ ನಿವೃತ್ತ ಪ್ರಧಾನ ಇಂಜಿನೀಯರ್ ಪ್ರಭಾಕರ ಚಿಣಿ ಅವರು ತಮ್ಮ‌ಕಾರ್ಯಕರ್ತರೊಂದಿಗೆ ಅಧಿಕೃತವಾಗಿ ಬಿಜೆಪಿ ಸೇರಿದರು.

Advertisement

ಕುಷ್ಟಗಿ ವಿಧಾನಸಭೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾಕರ ಚಿಣಿ, ಟಿಕೆಟ್ ಸಿಗದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಡೆಗೆ ಬೇಸತ್ತು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್ ಮುಖಂಡರಾದ ಚಂದ್ರಕಲಾ ಚಿಣಿ, ಪುರಸಭೆ ಪಕ್ಷೇತರ ಸದಸ್ಯ ಅಂಬಣ್ಣ ಭಜಂತ್ರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪರಶುರಾಮ ನಾಗರಾಳ, ಎಪಿಎಂಸಿ ಮಾಜಿ ಅಧ್ಯಕ್ಷ ಸಂಗಪ್ಪ ಮೆಣಸಗೇರಾ, ಕಸಾಪ ತಾಲೂಕಾ ಘಟಕದ ಅಧ್ಯಕ್ಷ ವೀರೇಶ ಬಂಗಾರಶೆಟ್ಟರ್, ಶ್ಯಾಮರಾವ್ ಕುಲಕರ್ಣಿ ಕಳಮಳ್ಳಿ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಶ್ಯಾಮೀದಸಾಬ್ ರಾಘವೇಂದ್ರ ದೇಸಾಯಿ, ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ನಾಗರಾಜ್ ಭೋವಿ, ಕಾಂಗ್ರೆಸ್ ಜಿಲ್ಲಾ ಹಿಂದುಳಿದ ವರ್ಗ ಘಟಕದ ಉಪಾಧ್ಯಕ್ಷ ಚಂದಪ್ಪ ಹೊಟ್ಟಿ, ಗುರುನಾಥ ಭಾವಿಕಟ್ಟಿ, ವಿಶ್ವಕರ್ಮ ಸಮಾಜದ ಅಧ್ಯಕ್ಷ ಮಾನಪ್ಪ ಕಮ್ಮಾರ, ದೇವಪ್ಪ ಬಡಿಗೇರ, ರಾಮು ದಿಗ್ಗಾವಿ, ಅಮರೇಶ ತಿಮ್ಮನಟ್ಟಿ, ಮುತ್ತಪ್ಪ ಮನ್ನಾಪೂರ ಬಿಜೆಪಿ ಸೇರಿದ್ದಾರೆ.

ಈ ಸಂದರ್ಭ ದಲ್ಲಿ ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಕುರಿ ಮತ್ತು ಉಣ್ಣೆ ನಿಗಮದ ಮಾಜಿ ಅಧ್ಯಕ್ಷ ಶರಣು ತಳ್ಳೀಕೇರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಮಹೇಶ. ತಾಲೂಕಾ ಬಿಜೆಪಿ ಮಂಡಳ ಅಧ್ಯಕ್ಷ ಬಸವರಾಜ ಹಳ್ಳೂರು, ಜಿಲ್ಲಾ ಅಲ್ಪಸಂಖ್ಯಾತ ಯುವ ಮೋ ಅಧ್ಯಕ್ಷ ಅಮಿನುದ್ದಿನ್ ಮುಲ್ಲಾ, ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ, ವಿಜಯಕುಮಾರ ಹಿರೇಮಠ. ಮಲ್ಲಣ್ಣ ಪಲ್ಲೇದ್ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next