Advertisement

ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ ಆಹಾರಧಾನ್ಯ ವಿತರಣೆ

05:40 PM May 07, 2020 | sudhir |

ಉಡುಪಿ: ಸಾರ್ವಜನಿಕ ವಿತರಣಾ ಪದ್ಧತಿಯಡಿಯಲ್ಲಿ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ ಎಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಬಿಡುಗಡೆಯಾಗಿರುವ ಆಹಾರಧಾನ್ಯವನ್ನು ಮೇ 7 ರಿಂದ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಲಾಗುವುದು.

Advertisement

ಅಂತ್ಯೋದಯ ಕಾರ್ಡಿನ ಪ್ರತಿ ಸದಸ್ಯರಿಗೆ ಎಪ್ರಿಲ್‌ ಮತ್ತು ಮೇ ತಿಂಗಳಿಗೆ 5 ಕೆ.ಜಿ.ಯಂತೆ ಒಟ್ಟು 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕಾರ್ಡಿಗೆ 1 ಕೆ.ಜಿ. ತೊಗರಿಬೇಳೆ ಉಚಿತವಾಗಿ ವಿತರಿಸಲಾಗುವುದು. ಪಿಎಚ್‌ ಎಚ್‌ ಕಾರ್ಡಿನ ಪ್ರತಿ ಸದಸ್ಯರಿಗೆ ಎಪ್ರಿಲ್‌ ಮತ್ತು ಮೇ ತಿಂಗಳ ತಿಂಗಳಿಗೆ 5 ಕೆ.ಜಿ.ಯಂತೆ ಒಟ್ಟು 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕಾರ್ಡಿಗೆ 1 ಕೆಜಿ ತೊಗರಿಬೇಳೆ ಉಚಿತವಾಗಿ ವಿತರಿಸಲಾಗುವುದು. ಪಿಎಚ್‌ ಎಚ್‌ ಪ್ರತಿ ಕಾರ್ಡಿಗೆ ತಿಂಗಳಿಗೆ 2 ಕೆ.ಜಿ.ಯಂತೆ ಒಟ್ಟು 4 ಕೆ.ಜಿ. ಗೋಧಿಯನ್ನು ಉಚಿತವಾಗಿ ವಿತರಿಸಲಾಗುವುದು. ಹೊಸದಾಗಿ ಅರ್ಜಿ ಸಲ್ಲಿಸಿರುವ ಪಿಎಚ್‌.ಹೆಚ್‌ (ಬಿಪಿಎಲ್‌) ಫ‌ಲಾನುಭವಿಗಳಿಗೆ ಪ್ರತಿ ಅರ್ಜಿಗೆ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು. ಆಹಾರಧಾನ್ಯ ಪಡೆಯಲು ನೋಂದಾಯಿಸದೆ ಇರುವ ಎನ್‌.ಪಿ.ಎಚ್‌.ಎಚ್‌. (ಎಪಿಎಲ್‌) ಏಕ ಸದಸ್ಯ ಪಡಿತರ ಚೀಟಿ ಕಾರ್ಡಿಗೆ 5 ಕೆ.ಜಿ. ಅಕ್ಕಿ ಮತ್ತು ಎರಡು ಮತ್ತು ಹೆಚ್ಚಿನ ಸದಸ್ಯರಿರುವ ಕಾರ್ಡುಗಳಿಗೆ 10 ಕೆ.ಜಿ. ಅಕ್ಕಿ ಪ್ರತಿ ಕೆಜಿಗೆ 15ರೂ.ನಂತೆ ವಿತರಿಸಲಾಗುವುದು. ಅಂತರ ರಾಜ್ಯ/ಅಂತರ-ಜಿಲ್ಲೆ ಪಡಿತರ ಚೀಟಿದಾರರು ಪೋರ್ಟೆಬಿಲಿಟಿಯಲ್ಲಿ ಆಹಾರಧಾನ್ಯ ಪಡೆಯಲು ಅವಕಾಶವಿದ್ದು, ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದಾಗಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಪಡಿತರ ಚೀಟಿದಾರರ ಆಧಾರ್‌ ದೃಢೀಕೃತ ಬೆರಳಚ್ಚು (ಆಧಾರ್‌ ಬಯೋಮೆಟ್ರಿಕ್‌)/ ಆಧಾರ್‌ ಒಟಿಪಿ/ಮೊಬೈಲ್‌ ಒಟಿಪಿ ದೃಢೀಕರಣದ ಮೂಲಕವೇ ಪಡಿತರ ವಿತರಿಸಲಾಗುವುದು. ಎಲ್ಲ ಪಡಿತರ ಚೀಟಿದಾರರು ಮೇ 25 ರೊಳಗೆ ಕಡ್ಡಾಯವಾಗಿ ಆಹಾರಧಾನ್ಯವನ್ನು ಪಡೆದುಕೊಳ್ಳುವಂತೆ ತಿಳಿಸಿದೆ.

ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರು ಪಡಿತರ ಪಡೆಯುವಾಗ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಹಾಗೂ ಬೆರಳಚ್ಚು ದೃಢೀಕರಣ ನೀಡುವ ಮೊದಲು ಸ್ಯಾನಿಟೈಸರ್‌ ಬಳಸಿ ಪಡಿತರ ಪಡೆಯುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next