Advertisement

ರಾಜ್ಯಕ್ಕೆ 10 ಎಲ್‌ಟಿ ಹೆಚ್ಚುವರಿ ಕಲ್ಲಿದ್ದಲು ಪೂರೈಕೆ: ಪ್ರಹ್ಲಾದ್‌ ಜೋಶಿ

12:14 AM Apr 20, 2022 | Team Udayavani |

ಬೆಂಗಳೂರು: ಕರ್ನಾಟಕದ ಕಲ್ಲಿದ್ದಲು ಆವಶ್ಯಕತೆಯನ್ನು ಪೂರೈಸಲು ಕಲ್ಲಿದ್ದಲು ಸಂಸ್ಥೆಗಳು ಪ್ರಯತ್ನ ಮಾಡುತ್ತಿವೆ. ಕೆಪಿಸಿಎಲ್‌ಗೆ ಸುಮಾರು 10 ಎಲ್‌ಟಿಯಷ್ಟು ಹೆಚ್ಚುವರಿ ಕಲ್ಲಿದ್ದಲು ಪೂರೈಸಲು ನಿರ್ಧರಿಸಿದ್ದು, ಎಪ್ರಿಲ್‌ ತಿಂಗಳಲ್ಲಿ ಕಲ್ಲಿದ್ದಲು ದಾಸ್ತಾನಿನಲ್ಲಿ ಶೇಕಡಾ 18 ಏರಿಕೆಯಾಗಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಏಳು ವರ್ಷದ ಅವಧಿಯಲ್ಲಿ (2015-2022) 792.63 ಲಕ್ಷ ಮೆಟ್ರಿಕ್‌ ಟನ್‌ ಕಲ್ಲಿದ್ದಲನ್ನು ಕೆಪಿಸಿಎಲ್‌ಗೆ ಪೂರೈಸಿದೆ ಎಂದು ತಿಳಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next