Advertisement

ಹೊರಟ್ಟಿ ಸೇರ್ಪಡೆ ಕುರಿತು ನಾಯಕರ ತೀರ್ಮಾನ : ಸಚಿವ ಪ್ರಹ್ಲಾದ ಜೋಶಿ

10:03 PM Apr 18, 2022 | Team Udayavani |

ಹುಬ್ಬಳ್ಳಿ: ಬಿಜೆಪಿಗೆ ಸೇರುತ್ತೇನೆಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರೇ ಹೇಳಿದ್ದಾರೆ. ಅವರ ಪಕ್ಷ ಸೇರ್ಪಡೆ ಕುರಿತಾಗಿ ಪಕ್ಷದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಟ್ಟಿ ಅವರು ಬರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು ಹಾಗೂ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ತೆಗೆದುಕೊಳ್ಳುತ್ತಾರೆ.

ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಈಗಾಗಲೇ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಿರುವ ಕುರಿತು ನನ್ನ ಗಮನಕ್ಕಿಲ್ಲ. 75 ವರ್ಷ ಮೇಲ್ಪಟ್ಟವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದರ ಕುರಿತು ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next