Advertisement
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಗೋವಾಕ್ಕೆ ಹಾಗೂ ಉತ್ತರಾಖಂಡಕ್ಕೆ 13 ವೀಕ್ಷಕರು ಬಂದಿದ್ದರು. ಚುನಾವಣೆಯನ್ನು ಕಾಂಗ್ರೆಸ್ ಕುಸ್ತಿಯ ಕಣ, ಡಬ್ಲ್ಯುಡಬ್ಲ್ಯುಎಫ್ ಎಂದುಕೊಂಡಿದೆಯಾ? ಜನ ತೀರ್ಪು ಕೊಡುವ ಮುನ್ನವೇ ಇವರು ಅಲ್ಲಿಗೆ ತೆರಳಿದ್ದಾರೆ. ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಿದರು ಎಂಬಂತೆ ಕಾಂಗ್ರೆಸ್ ನಡೆಯಾಗಿದೆ. ಫಲಿತಾಂಶ ಬರುವ ಮುನ್ನವೇ ಅಲ್ಲಿಗೆ ಹೋಗಿ ಗೂಂಡಾಗಿರಿ ಮಾಡಲು ತಯಾರಿ ಮಾಡಿದ್ದರೆ. ಕಾಂಗ್ರೆಸ್ ನ ಈ ನಡೆ ಗೊತ್ತಾಗುತ್ತಿಲ್ಲ ಎಂದರು.
Related Articles
Advertisement
ಪಂಜಾಬ್ ನಲ್ಲಿ ನಾವು ಅಕಾಲಿದಳದ ಜೊತೆಗೆ ಜ್ಯೂನಿಯರ್ ಪಾರ್ಟ್ನರ್ ಆಗಿದ್ದೇವು. ಹೀಗಾಗಿ ಅಲ್ಲಿ ನಮಗೆ ಹಿನ್ನಡೆಯಾಗಿದೆಯಷ್ಟೆ. ಮುಂದಿನ ಚುನಾವಣೆ ವೇಳೆಗೆ ಅಲ್ಲಿ ಹೆಚ್ಚಿನ ಒತ್ತು ನೀಡಲಾಗುತ್ತದೆ. ಬಿಜೆಪಿ ಗೆಲುವು ಸಾಧಿಸಿದ ನಾಲ್ಕು ರಾಜ್ಯಗಳಲ್ಲಿ ಮುಖ್ಯಮಂತ್ರಿಗಳ ಆಯ್ಕೆ ಪ್ರಕ್ರಿಯೆ ಮುಗಿಸಬೇಕಿದೆ ಎಂದರು.
ಅಧಿವೇಶನ ನಂತರ ಸಂಪುಟ ವಿಸ್ತರಣೆ: ಅಧಿವೇಶನದ ನಂತರ ಮಂತ್ರಿ ಮಂಡಲ ವಿಸ್ತರಣೆ ಚರ್ಚೆ ಆಗಲಿದೆ. ಮುಖ್ಯಮಂತ್ರಿಗಳು ದೆಹಲಿಗೆ ಬಂದು ಪಕ್ಷದ ಹಿರಿಯ ಮುಖಂಡರ ಜೊತೆಗೆ ಚರ್ಚೆ ಮಾಡಲಿದ್ದಾರೆ. ಏಪ್ರಿಲ್ 8ರ ವರೆಗೆ ಅಧಿವೇಶನ ಇದೆ. ಅದರ ನಂತರ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬೆಳವಣಿಗೆ ಆಗಲಿದೆ. ಸದ್ಯ ಯಾವುದೇ ಪ್ರಕ್ರಿಯೆ ಆಗಲ್ಲ ಎಂದರು.
ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧದ ಸಂದರ್ಭದಲ್ಲೂ ಆ ದೇಶಗಳೊಂದಿಗೆ ಪ್ರಧಾನಿ ಮಾತುಕತೆ ನಡೆಸಿ ದೇಶದ 22ಸಾವಿರ ಜನರನ್ನು ರಕ್ಷಿಸಿ, ದೇಶಕ್ಕೆ ಕರೆತಂದರು. ಇದು ಮೋದಿ ಅವರ ವ್ಯಕ್ತಿತ್ವದ ಗಟ್ಟಿತನ ತೋರಿಸುತ್ತದೆ ಎಂದರು.