Advertisement

ಡಿಕೆಶಿ ಬಂಧನ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಮಾಡುವುದು ದುರಂತ: ಪ್ರಹ್ಲಾದ ಜೋಶಿ

09:51 AM Sep 15, 2019 | keerthan |

ಹುಬ್ಬಳ್ಳಿ: ಅಕ್ರಮ ಆಸ್ತಿ ಕುರಿತು ಡಿ.ಕೆ.ಶಿವಕುಮಾರ್ ಅವರನ್ನು ಇ.ಡಿ. ವಶಕ್ಕೆ ಪಡೆದಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿರುವುದು ದುರಂತ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

Advertisement

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರು ಕೇಂದ್ರ ಸರಕಾರದ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದರು.

ಕೆಲ ಪಟ್ಟಭದ್ರ ಹಿತಾಸಕ್ತಿಗಳು ಸ್ವಜಾತಿ ಹೆಸರಿನಲ್ಲಿ ಪ್ರತಿಭಟನೆ ನಡೆಸುವುದು ಸೂಕ್ತವಲ್ಲ. ಅಮಿತ ಶಾ, ಪ್ರಧಾನಿ ಮೋದಿ ಅವರ ಪ್ರತಿಕೃತಿ ದಹಿಸಿದರೆ ಏನೂ ಪ್ರಯೋಜನವಾಗದು ಎಂದರು.

ಡಿ.ಕೆ.ಶಿವಕುಮಾರ್ ಅವರ ಪುತ್ರಿಯ ಬಳಿ ೧೦೮ ಕೋಟಿ ರೂ. ಹೇಗೆ ಬಂತು ಎಂಬುದನ್ನು ಅವರು ಸ್ಪಷ್ಟಪಡಿಸಲಿ ಎಂದರು. ಅವರು ಕಡಿದು ಕಟ್ಟೆ ಹಾಕಿ ಗಳಿಸಿದ್ದಾರೆ ಎಂಬುದು ಜನರಿಗೆ ತಿಳಿಯಲಿ. ರಾಜಕೀಯಕ್ಕೆ ಬರುವ ಮುಂಚೆ ಶಿವಕುಮಾರ್ ಅವರ ಆಸ್ತಿ ಎಷ್ಟಿತ್ತು? ಈಗ ಎಷ್ಟಾಗಿದೆ ಎಂಬುದು ಜನರಿಗೆ ತಿಳಿದಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next