Advertisement

“ಪ್ರಜ್ವಲ್‌ ಸ್ಪರ್ಧೆ: ದೇವೇಗೌಡರ ನಿರ್ಧಾರ ಅಂತಿಮ’

08:40 AM Jul 24, 2017 | Team Udayavani |

ನಾಗಮಂಗಲ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಪ್ರಜ್ವಲ್‌ ರೇವಣ್ಣ ಸ್ಪರ್ಧಿಸಬೇಕೋ, ಬೇಡವೋ ಎಂಬುದರ ಕುರಿತು ಎಚ್‌.ಡಿ.ದೇವೇಗೌಡರು ತೀರ್ಮಾನ ಕೈಗೊಳ್ಳುತ್ತಾರೆ. ಅದೇ ಅಂತಿಮ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದರು.

Advertisement

ಇಲ್ಲಿನ ಆದಿಚುಂಚನಗಿರಿ ಮಠಕ್ಕೆ ಕುಟುಂಬ ಸಮೇತ ಅಮಾವಾಸ್ಯೆ ಪೂಜೆಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ
ಮಾತನಾಡಿದ ಅವರು, “ಪ್ರಜ್ವಲ್‌ಗೆ ಜೆಡಿಎಸ್‌ ಟಿಕೆಟ್‌ ವಿಚಾರ ಸಂಬಂಧ ಈಗ ತಲೆಕೆಡಿಸಿಕೊಳ್ಳುವುದಿಲ್ಲ. ಸಮಯ ಬಂದಾಗ ಅದಕ್ಕೆ ಉತ್ತರ ಸಿಗುತ್ತದೆ’ ಎಂದರು.

“ನನ್ನ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಕುಟುಂಬದ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರೂ ಜಗಳ
ಆಡ್ತಾರೆ ಅಂತ ಯಾರಾದರೂ ಭಾವಿಸಿದ್ದರೆ ಅವರಿಗೆ ನಿರಾಶೆ ಖಚಿತ. ಜೆಡಿಎಸ್‌ನಲ್ಲಿ ಎಚ್‌.ಡಿ.ದೇವೇಗೌಡ ಮತ್ತು ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದೇ ಫೈನಲ್‌. ಈ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ’ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next