Advertisement

Mysuru ಪ್ರಧಾನಿ ಮೋದಿ ರ‍್ಯಾಲಿಯಲ್ಲೂ ಮುಂದುವರಿದ ಪ್ರಜ್ವಲ್ -ಪ್ರೀತಂ ಮುನಿಸು!

05:19 PM Apr 14, 2024 | Team Udayavani |

ಮೈಸೂರು: ಮಹಾರಾಜ ಕಾಲೇಜು ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸಮಾವೇಶದಲ್ಲಿ ಜೆಡಿಎಸ್ ಸಂಸದ  ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರ ನಡುವೆ ಇರುವ ಮುನಿಸು ಬಹಿರಂಗವಾಗಿದೆ.

Advertisement

ಪ್ರಧಾನಿ ಮೋದಿ ಅವರು ಬೃಹತ್ ಸಭೆ ಉದ್ದೇಶಿಸಿ ಎನ್ ಡಿಎ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಸಭೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಜೆಡಿಎಸ್ ಅಭ್ಯರ್ಥಿ ಎಚ್ . ಡಿ.ಕುಮಾರಸ್ವಾಮಿ, ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ, ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಸಂಸದ ಪ್ರತಾಪ್ ಸಿಂಹ, ಮಂಡ್ಯ ಸಂಸದೆ ಸುಮಲತಾ ಸೇರಿ ಪ್ರಮುಖ ನಾಯಕರು ವೇದಿಕೆಯಲ್ಲಿ ಹಾಜರಿದ್ದರು.

ವೇದಿಕೆಗೆ ಬಂದ ಪ್ರಜ್ವಲ್ ಅವರು ಎಲ್ಲರನ್ನೂ ಮಾತನಾಡಿಸುತ್ತಾ ಹೋದರೂ ಪ್ರೀತಮ್ ಗೌಡ ಅವರ ಸುದ್ದಿಗೆ ಹೋಗಲಿಲ್ಲ. ಯಡಿಯೂರಪ್ಪ, ರೇವಣ್ಣ, ದೇವೇಗೌಡ ಅವರ ಕಾಲಿಗೆರಗಿ ನಮಸ್ಕರಿಸಿದರು. ಆ ಬಳಿಕ ಆಸೀನರಾದ ಪ್ರಜ್ವಲ್ ಅವರು ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ಆತ್ಮೀಯವಾಗಿ ಮಾತುಕತೆಯಲ್ಲಿ ನಿರತರಾದರು.

ಭೋಪಾಲ್ ನಿಂದ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಸಂಜೆ 5 ಗಂಟೆಗೆ ಆಗಮಿಸಿ ಹೆಲಿಕ್ಯಾಪ್ಟರ್ ಮೂಲಕ ಸಮಾವೇಶ ಸ್ಥಳಕ್ಕೆ ಆಗಮಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next