Advertisement

ಪ್ರಜ್ವಲ್‌ ರೇವಣ್ಣ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

11:05 PM Jun 26, 2019 | Lakshmi GovindaRaj |

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ  ವಿರುದ್ಧ ಬಿಜೆಪಿ ಪರಾಜಿತ ಅಭ್ಯರ್ಥಿ ಎ. ಮಂಜು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ ಆಯ್ಕೆಯನ್ನು ಅನರ್ಹಗೊಳಿಸಬೇಕು. ಚುನಾವಾಣಾ ಫ‌ಲಿತಾಂಶ ರದ್ದುಗೊಳಿಸಿ ತಮ್ಮನ್ನು ಚುನಾಯಿತ ಅಭ್ಯರ್ಥಿ ಎಂದು ಘೋಷಿಸುವಂತೆ ಕೋರಿ ಎ. ಮಂಜು ಸಲ್ಲಿಸಿರುವ ಈ ಚುನಾವಣಾ ತಕರಾರು ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

Advertisement

ಚುನಾವಣೆಗೆ ಸ್ಪರ್ಧಿಸಿದ ವೇಳೆ ಪ್ರಜ್ವಲ್‌ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅನೇಕ  ಸತ್ಯ ಸಂಗತಿಗಳನ್ನು ಅವರು ಮರೆಮಾಚಿದ್ದಾರೆ. ತಮ್ಮ ಆದಾಯ, ಪಡೆದುಕೊಂಡಿರುವ ಸಾಲ, ಹೂಡಿಕೆ ಮಾಡಿರುವ ಹಣ, ವಿವಿಧ ಕಂಪೆನಿಗಳಲ್ಲಿ ಹೊಂದಿರುವ ಪಾಲುದಾರಿಕೆ ಬಗ್ಗೆ ಮಾಹಿತಿ ನೀಡಿಲ್ಲ. ಆದ್ದರಿಂದ ಅವರ ಸದಸ್ವತ್ವವನ್ನು ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next