Advertisement

ಹಾಸನದಲ್ಲಿ ನಾಮಪತ್ರ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

07:07 AM Mar 22, 2019 | Karthik A |

ಹಾಸನ: ತನ್ನ ತಾತ ಹೆಚ್‌.ಡಿ.ದೇವೇಗೌಡರು ಪ್ರತಿನಿಧಿಸುತ್ತಿದ್ದ ಪ್ರತಿಷ್ಠಿತ ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಾತ್ಮಕ ರಾಜಕೀಯ ಜೀವನವನ್ನು ಪ್ರಾರಂಭಿಸಲು ಉದ್ದೇಶಿಸಿರುವ ಪ್ರಜ್ವಲ್‌ ರೇವಣ್ಣ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು.

Advertisement

ಹಾಸನದಲ್ಲಿ ಭರ್ಜರಿ ರೋಡ್‌ ಶೋ ಮೂಲಕ ಸಾಗಿಬಂದ ಪ್ರಜ್ವಲ್‌ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳ ಹರ್ಷೋದ್ಘಾರದ ನಡುವೆ ಮೆರವಣಿಗೆಯಲ್ಲಿ ಹಾಸನ ಜಿಲ್ಲಾಧಿಕಾರಿ ಕಛೇರಿಗೆ ಬಂದು ಅಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಪ್ರಜ್ವಲ್‌ ಅವರ ನಮಪತ್ರ ಸಲ್ಲಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸಹಿತ ಸಚಿವ ಹೆಚ್‌.ಡಿ. ರೇವಣ್ಣ, ಭವಾನಿ ರೇವಣ್ಣ ಸಾಕ್ಷಿಯಾದರು. ನಾಮಪತ್ರ ಸಲ್ಲಿಕೆಗೂ ಮೊದಲು ಪ್ರಜ್ವಲ್‌ ರೇವಣ್ಣ ಅವರು ತಂದೆ, ತಾಯಿ ಮತ್ತು ಚಿಕ್ಕಪ್ಪ ಕುಮಾರಸ್ವಾಮಿ ಅವರಿಗೆ ನಮಿಸಿದ್ದು ವಿಶೇಷವಾಗಿತ್ತು. ಪ್ರಜ್ವಲ್‌ ಅವರ ನಾಮಪತ್ರಕ್ಕೆ ಕುಮಾರಸ್ವಾಮಿಯವರು ಸೂಚಕರಾಗಿ ಸಹಿ ಮಾಡಿದರು.

ರೋಡ್‌ ಶೋ ಸಂದರ್ಭದಲ್ಲಿ ಅಭಿಮಾನಿಗಳು ಪ್ರಜ್ವಲ್‌ ಅವರಿಗೆ 800 ಕೆ.ಜಿ. ಸೇಬುಗಳಿಂದ ತಯಾರಿಸಿದ ಬೃಹತ್‌ ಹಾರವನ್ನು ಹಾಕಿದ್ದು ವಿಶೇಷವಾಗಿತ್ತು. ಜೆಡಿಎಸ್‌ ನಾಯಕ ಜಿ.ಟಿ. ದೇವೇಗೌಡ ಮತ್ತು ಕಾಂಗ್ರೆಸ್‌ ನ ಕೆಲವು ಸ್ಥಳೀಯ ಮುಖಂಡರು ಪ್ರಜ್ವಲ್‌ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next