Advertisement

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

11:51 PM May 04, 2024 | Team Udayavani |

ತುಮಕೂರು: ಪ್ರಜ್ವಲ್‌ ರೇವಣ್ಣ ನನಗೆ ಆತ್ಮೀಯ ಸ್ನೇಹಿತ. ಅವರು ಅಂಥ ಸ್ವಭಾವದ ಹುಡುಗ ಅಲ್ಲ. ಏನು ಗ್ರಹಚಾರವೋ, ಯಾರ ಕೈವಾಡವೋ ಗೊತ್ತಿಲ್ಲ. ಇದರ ಹಿಂದೆ ವಿಪಕ್ಷದವರ ಕೈವಾಡ ಇರಬಹುದು ಎಂದು ಸಂಸದ ಜಿ.ಎಸ್‌.ಬಸವರಾಜು ತಿಳಿಸಿದರು.

Advertisement

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ ಬಗ್ಗೆ ಮಾತನಾಡಿದ ಅವರು, ಇತ್ತೀಚೆಗೆ ಈ ರೀತಿ ತೇಜೋವಧೆ ಮಾಡುವ ಹೆಚ್ಚಾಗಿದೆ. ರಮೇಶ ಜಾರಕಿಹೊಳಿಗೂ ಪಿತೂರಿ ಮಾಡಿ, ಮಾನ-ಮರ್ಯಾದೆ ಹರಾಜು ಹಾಕಿದ್ದಾರೆ. ಮೊದಲು ಪ್ರಜ್ವಲ್‌ ರೇವಣ್ಣ ಪ್ರಕರಣ ಸತ್ಯವೋ, ಸುಳ್ಳೋ ಎಂಬುದು ಸಾಬೀತು ಆಗಲಿ. ಒಂದು ವೇಳೆ ಮಹಿಳೆಯರಿಗೆ ಅನ್ಯಾಯ ಆಗಿದ್ದೇ ಆದರೆ ಶಿಕ್ಷೆ ಆಗಲೇಬೇಕು ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next