Advertisement

ಮೇಕೆದಾಟು ಯೋಜನೆ ರಾಜ್ಯದ ಹಕ್ಕು

10:04 PM Aug 05, 2021 | Team Udayavani |

ನವದೆಹಲಿ: ಮೇಕೆದಾಟು ಯೋಜನೆ ಕರ್ನಾಟಕದ ಹಕ್ಕು ಎಂದು ಎಂದು ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ಪ್ರತಿಪಾದಿಸಿದ್ದಾರೆ. ರಾಜ್ಯಕ್ಕೆ ಮೀಸಲಾಗಿ ಇರುವ ನೀರಿನ ಪ್ರಮಾಣ ಬಳಕೆ ಮಾಡಲಿದ್ದೇವೆ ಎಂದೂ ಹೇಳಿದ್ದಾರೆ. ಲೋಕಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ಕರ್ನಾಟಕಕ್ಕೆ ಮೀಸಲಾಗಿ ಇರುವ ನೀರಿನ ಪ್ರಮಾಣ ಮಾತ್ರ ಮೇಕೆದಾಟು ಮೂಲಕ ಬಳಕೆ ಮಾಡಲಾಗುತ್ತದೆ. ಇದರಿಂದ ನೆರೆಯ ತಮಿಳುನಾಡಿಗೆ ಯಾವುದೇ ಅನ್ಯಾಯ ಆಗುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.

Advertisement

ಕಾವೇರಿ ನ್ಯಾಯಾಧಿಕರಣ ನೀಡಿದ್ದ ತೀರ್ಪಿನ ಅನ್ವಯ ರಾಜ್ಯಕ್ಕೆ ದೊರಕಿರುವ ನೀರನ್ನು ಕುಡಿಯುವ ಮತ್ತು ವಿದ್ಯುತ್‌ ಉತ್ಪಾದಿಸಲು ಬಳಕೆ ಮಾಡುಲು ಉದ್ದೇಶಿಸಿದ್ದೇವೆ ಎಂದರು. ಸುಪ್ರೀಂ ಕೋರ್ಟ್‌ಗಾಗಲೀ ಅಥವಾ ಬೇರೆ ರಾಜ್ಯಕ್ಕಾಗಲಿ ಯಾವುದೇ ರೀತಿಯಲ್ಲಿ ಅಗೌರವ ಸೂಚಿ ಸುತ್ತಿಲ್ಲ. ನಮಗೆ ನೀಡಲಾಗಿರುವ ನೀರನ್ನು ಉಪಯೋಗಿಸಲು ತಮಿಳುನಾಡನ್ನು ಕೇಳುವ ಅವಶ್ಯಕತೆ ಏನಿದೆ ಎಂದು ರೇವಣ್ಣ ಕೇಂದ್ರ ಸಚಿವರಿಗೆ ಪ್ರಶ್ನಿಸಿದರು.

ಮೇಕೆದಾಟು ಯೋಜನೆಗೆ ಒಕ್ಕೂಟ ಸರ್ಕಾರ ಶೀಘ್ರವೇ ಅನುಮತಿ ನೀಡ ಬೇಕು. ರಾಜ್ಯದ ಬಿಜೆಪಿ ಸರ್ಕಾರ ಕೂಡ ಸರ್ಕಾರದ ಮೇಲೆ ಒತ್ತಡ ತಂದು ಯೋಜನೆಗೆ ಅನುಮತಿ ಸಿಗುವಂತೆ ಮಾಡ ಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅನುಮತಿ ಬೇಕು: ರೇವಣ್ಣ ಪ್ರಶ್ನೆ ಉತ್ತರಿಸಿದ ಕೇಂದ್ರ ಜಲಶಕ್ತಿ ಖಾತೆ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿರುವ ಸಮಗ್ರ ಯೋಜನಾ ವರದಿಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿ ಬೇಕು ಎಂದರು. ಡಿಪಿಆರ್‌ಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಆದರೆ, ಇದಕ್ಕೆ ಕಾವೇರಿ ಕಣಿವೆಯ ರಾಜ್ಯಗಳ ಸಮ್ಮತಿ ಬೇಕು. ಈ ಅಂಶದ ಬಗ್ಗೆ ರಾಜ್ಯ ಸರ್ಕಾರಕ್ಕೆ ಡಿಪಿಆರ್‌ ಸಿದ್ಧಪಡಿಸುವ ಬಗ್ಗೆ ಕೋರಿಕೆ ಸಲ್ಲಿಸಿದಾಗಲೇ ಸೂಚಿಸಲಾಗಿತ್ತು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next