Advertisement

ಎಸ್ಎಂ ಕೃಷ್ಣ ಆಯ್ತು, ಈಗ ಪ್ರಕಾಶ್ ಹುಕ್ಕೇರಿ ಕಾಂಗ್ರೆಸ್ ಗೆ ಗುಡ್ ಬೈ?

03:49 PM Jan 29, 2017 | Sharanya Alva |

ಚಿಕ್ಕೋಡಿ: ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಕೂಡಲೇ ಅವರು ರಾಜೀನಾಮೆ ವಾಪಸ್ ಪಡೆಯುವಂತೆ ಮಾಡಬೇಕು, ಇಲ್ಲದಿದ್ದಲ್ಲಿ ತಾನೂ ಕೂಡಾ ಅವರ ಹಾದಿ ತುಳಿಯಬೇಕಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಸಂಸದ ಪ್ರಕಾಶ್ ಹುಕ್ಕೇರಿ ಬಾಂಬ್ ಸಿಡಿಸಿದ್ದಾರೆ!

Advertisement

ಕಾಂಗ್ರೆಸ್ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಿ, ಮೂಲೆ ಗುಂಪು ಮಾಡಿರುವುದಕ್ಕೆ ಮನನೊಂದ ಎಸ್ಎಂ ಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಕೃಷ್ಣಾ ಅವರ ಕಟ್ಟಾ ಬೆಂಬಿಗರಾಗಿರುವ ಹುಕ್ಕೇರಿ ಕೂಡಾ ಕಾಂಗ್ರೆಸ್ ತೊರೆಯುವ ನಿರ್ಧಾರದ ಹಂತದಲ್ಲಿದ್ದಾರೆ ಎಂದು ಖಾಸಗಿ ಟಿವಿ ಚಾನೆಲ್ ವರದಿಯೊಂದು ತಿಳಿಸಿದೆ.

ನಾಳೆ ಬೆಳಗ್ಗೆ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ. ಒಂದು ವೇಳೆ ಎಸ್ಎಂಕೆ ರಾಜೀನಾಮೆ ವಾಪಸ್ ಪಡೆಯದಿದ್ದರೆ, ನಾನೂ ಕೂಡಾ ಅವರ ಹಾದಿ ಹಿಡಿಯಬೇಕಾಗುತ್ತದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next