Advertisement

ಪ್ರಕಾಶ್‌ ರಾಜ್‌ ನಾಮಪತ್ರ ಅಸಿಂಧುಗೊಳಿಸಿ

01:29 AM Apr 01, 2019 | Vishnu Das |

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಪ್ರಕಾಶ್‌ ರಾಜ್‌ ಅವರ ನಾಮಪತ್ರವನ್ನು ಅಸಿಂಧುಗೊಳಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಕೆ.ಗಿರೀಶ್‌ ಕುಮಾರ್‌ ನಾಯ್ಡು ಒತ್ತಾಯಿಸಿದರು. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕಾಶ್‌ ರಾಜ್‌ ಅವರ ಹೆಸರು ಮೂರು ರಾಜ್ಯದ ಮತದಾರರ ಪಟ್ಟಿಯಲ್ಲಿದೆ.

Advertisement

ತಮಿಳುನಾಡಿನ ವೇಲಚರಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಕಡೆ, ತೆಲಂಗಾಣದ ಸಿರಿಲಿಂ ಗಂಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಕಡೆ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಉಳಿಸಿಕೊಂಡಿದ್ದಾರೆ ಎಂದರು. ಈ ಬಗ್ಗೆ ದೂರು ನೀಡಿದರೂ ಚುನಾವಣಾಧಿಕಾರಿಗಳು ಸ್ಪಂದಿಸುತ್ತಿಲ್ಲ. ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಚೆನ್ನೈಗೆ ಹೋಗಿ ದೂರು ದಾಖಲಿಸಿ ಎಂದು ಹೇಳಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಈ ಪ್ರಕರಣ ಸಂಬಂಧ ಕೋರ್ಟ್‌ನಲ್ಲಿ ದೂರು ದಾಖಲಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next