Advertisement

ದಲಿತರ ಸೌಲಭ್ಯ ಕಬಳಿಸಿದ ರೇಣುಕಾಚಾರ್ಯ ವಿರುದ್ಧ ಕ್ರಮ ಕೈಗೊಳ್ಳಲಿ: ಪ್ರಕಾಶ ರಾಠೋಡ

11:18 AM Apr 04, 2022 | Team Udayavani |

ವಿಜಯಪುರ: ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು, ಸರ್ಕಾರದ ದಲಿತರ ಸೌಲಭ್ಯ ಕಬಳಿಸಿದ ಶಾಸಕ ರೇಣುಕಾಚಾರ್ಯ ವಿರುದ್ಧ ಸರ್ಕಾರ ಕ್ರಮ‌ ಕೈಗೊಳ್ಳಬೇಕು ಎಂದು ಮೇಲ್ಮನೆ ವಿಪಕ್ಷ ಮುಖ್ಯ ಸಚೇತಕ ಪ್ರಕಾಶ ರಾಠೋಡ ಆಗ್ರಹಿಸಿದರು.

Advertisement

ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಆಗ್ರಹ ಮಾಡಿದ ರಾಠೋಡ, ಶಾಸಕ ರೇಣುಕಾಚಾರ್ಯ ಹಾಗೂ ಅವರ ಕುಟುಂಬ ಕಬಳಿಸಿರುವ ಎಲ್ಲ ಸೌಲಭ್ಯಗಳ ಹಣವನ್ನು ಮರು ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ರೇವ್ ಪಾರ್ಟಿಗೆ ಪೊಲೀಸ್ ದಾಳಿ; ಚಿರಂಜೀವಿ ಸೊಸೆ, ಬಿಗ್ ಬಾಸ್ ವಿನ್ನರ್ ಸೇರಿ 142 ಜನರ ಬಂಧನ

ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಮೇಲ್ಮನೆ ವಿಪಕ್ಷ ಸ್ಥಾನ ಸಿಗಲಿಲ್ಲವೆಂದು ಕಾಂಗ್ರೆಸ್ ತೊರೆದಿದ್ದಾರೆ. ಕಾಂಗ್ರೆಸ್ ಪಕ್ಷ ಇಬ್ರಾಹಿಂ ಅವರಿಗೆ ಎಲ್ಲ ಅಧಿಕಾರ, ಅವಕಾಶ, ಎಲ್ಲವನ್ನೂ ನೀಡಿತ್ತು. ಆದರೆ ಆದಿಕಾರದ ಸ್ವಾರ್ಥಕ್ಕಾಗಿ ಇಬ್ರಾಹಿಂ ಅವರು ಪಕ್ಷ ತೊರೆದಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next