Advertisement

ಅತ್ಯಾಚಾರ ಎಸಗಿ, ಕೊಲೆ ಮಾಡಿದ ಪ್ರಕರಣ: ತಪ್ಪಿತಸ್ಥರ ವಿರುದ್ಧಕ್ರಮಕ್ಕೆ ಪ್ರಕಾಶ ರಾಠೋಡ ಆಗ್ರಹ

04:39 PM May 26, 2021 | Team Udayavani |

ವಿಜಯಪುರ : ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಗ್ರಾಮವೊಂದರಲ್ಲಿ ದಲಿತ ವರ್ಗದ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಕುರಿತು ದಾಖಲಾಗಿರುವ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರರಾದ ಮೇಲ್ಮನೆ ಸದಸ್ಯ ಪ್ರಕಾಶ ರಾಠೋಡ ಆಗ್ರಹಿಸಿದ್ದಾರೆ.

Advertisement

ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು,  ಪ್ರಕರಣದಲ್ಲಿ ಯುವಕನ ಹೆಸರನ್ನು ಬಾಲಕಿಯರ ಪೊಷಕರು ದಿ.:14-5-2021ರಂದು ನೀಡಿರುವ ದೂರು ದಾಖಲಿಸಿದ್ದಾರೆ. ಇಬ್ಬರು ಬಾಲಕಿಯವರು ಕಣ್ಮರೆಯಾಗಿ, ನಂತರ ಶವವಾಗಿ ಪತ್ತೆಯಾಗಿದ್ದಾರೆ.  ಸದರಿ ಕೃತ್ಯ ಮಯಾ೯ದೆ ಹತ್ಯೆ ಎಂದು ಮೇಲ್ನೊಟಕ್ಕೆ ಕಂಡುಬಂದಿದೆ. ಐದಾರು  ತಿಂಗಳಿಂದ ಬಾಲಕಿಯೊಬ್ಬಳ ಹಿಂದೆ ಬಿದ್ದಿದ್ದ ಆರೋಪಿಯೊಬ್ಬ ಪ್ರೀತಿಸುವಂತೆ ಪೀಡಿಸಿ, ಕಿರುಕುಳ ನೀಡಿರುವುದು ಕಂಡುಬಂದಿದೆ. ಪದೇ ಪದೇ ಈ ರೀತಿ ಘಟನೆ ನಡೆಯುತ್ತಿರುವುದರಿಂದ, ಸದರಿ ವಿಷಯವನ್ನು ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕೆಂದು ಮತ್ತು ಸದರಿ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಉಡುಪಿ : ಎಪಿಎಂಸಿ ಪ್ರಾಂಗಣದಲ್ಲಿ ಬುಧವಾರ ನಡೆಯುತ್ತಿದ್ದ ವಾರದ ಸಂತೆ ರದ್ದು

ಇದೇ ವಿಷಯವಾಗಿ ಬುಧವಾರ ಪೊಲೀಸ್  ಮಹಾನಿದೇ೯ಶಕ ಹಾಗೂ ಪೊಲೀಸ್ ಮಹಾನಿರೀಕ್ಷರನ್ನು ತಾವು ಕಾಂಗ್ರೆಸ್ ಮುಖಂಡರಾದ ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ಸೈಯದ್  ನಾಸೀರ್  ಹುಸೈನ್ ಅವರೊಂದಿಗೆ ಭೇಟಿಯಾಗಿ ದೂರು ನೀಡಿದ್ದಾಗಿ ಪ್ರಕಾಶ ರಾಠೋಡ ತಿಳಿಸಿದ್ದಾರೆ.

ಇದಲ್ಲದೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಕೂಡ ವಿಜಯಪುರ ಜಿಲ್ಲೆಯ ಪೊಲೀಸ್ ಅಧೀಕ್ಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ಎಸ್ಪಿ ಅವರು ಭರವಸೆ ನೀಡಿದ್ದಾರೆ.

Advertisement

ಪೊಲೀಸ್ ಅಧೀಕ್ಷಕರು ಈ ಬಗ್ಗೆ ಸೂಕ್ತ ಕ್ರಮಕೈಗೊಂಡು, ತಪ್ಪಿತಸ್ತರಿಗೆ ಕಠಿಣ ಶಿಕ್ಷೆ ನೀಡುವುದಾಗಿಯೂ ಆಶ್ವಾಸನೆ ನೀಡಿದ್ದಾರೆ.

ಇದೇ ಸಂದಭ೯ದಲ್ಲಿ ಮೇಲ್ಮನೆ ಸದಸ್ಯ ಪ್ರಕಾಶ ರಾಠೋಡ  ವಿಜಯಪುರ ಜಿಲ್ಲೆಯ ಪೊಲೀಸ್  ಅಧೀಕ್ಷಕರೊಂದಿಗೆ ಮತ್ತು ಬಸವನ   ಬಾಗೇವಾಡಿಯ ಸಿಪಿಐ ಅವರೊಂದಿಗೆ‌ ಮಾತನಾಡಿದಾಗ ತಪ್ಪಿತಸ್ಥರ ವಿರುದ್ಧ ನಿಷ್ಪಕ್ಷಪಾತ ಕ್ರಮ ಕೈಗೊಂಡು ತಪ್ಪಿತಸ್ಥರ  ವಿರುದ್ಧ ದೌಜ೯ನ್ಯ ಕೃತ್ಯ ಕ್ರಮ ತೆಗೆದುಕೊಳ್ಳುವ ಆಶ್ವಾಸನೆ ನೀಡಿದ್ದಾಗಿ ಮೇಲ್ಮನೆ ಸದಸ್ಯ ಪ್ರಕಾಶ ರಾಠೋಡ  ತಿಳಿಸಿದ್ದಾರೆ ರುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next