Advertisement

ಅಂಬೇಡ್ಕರ್ ಗೆ ಮೊದಲು ಭಾರತರತ್ನ ನೀಡದೆ ರಾಜೀವ್ ಗಾಂಧಿಗೆ ನೀಡಿದ್ಯಾಕೆ: ಪ್ರಹ್ಲಾದ್ ಜೋಶಿ

09:54 AM Oct 22, 2019 | Team Udayavani |

ಹುಬ್ಬಳ್ಳಿ:  ಸಿದ್ಧರಾಮಯ್ಯನವರು ವೀರಸಾವರ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರಿಗೆ ಗಟ್ಸ್ ಇದ್ದರೆ ಅಂಬೇಡ್ಕರ್ ಗೆ ಮೊದಲೇ ಭಾರತರತ್ನ ಕೊಡಿ ಅಂತಾ ಕೇಳಬೇಕಿತ್ತು. ಅಂಬೇಡ್ಕರ್ ಅವರಿಗೆ ಮೊದಲು ಭಾರತರತ್ನ ನೀಡದೇ ರಾಜೀವ್ ಗಾಂಧಿಯವರಿಗೆ ಕೊಡಲಾಯಿತು ಅವರ ತಾತ, ತಾಯಿ ಪ್ರಧಾನಿಯಾಗಿದ್ದಕ್ಕೆ ಅವರಿಗೆ ಬಳುವಳಿಯಾಗಿ ಕೊಡಲಾಯಿತು. ಬದಲಾಗಿ ಸಂವಿಧಾನ ಬರೆದಿರುವ ಅಂಬೇಡ್ಕರ್ ಅವರಿಗೆ ಕೊಡಲಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ.

Advertisement

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದೇಶ ಕಂಡ ಅಪ್ರತಿಮ ವೀರ ಸಾವರ್ಕರ್ ಅವರ ಬಗ್ಗೆ ಅಪಮಾನ ಮಾಡೋದು ಸರಿಯಲ್ಲ. ಸಿದ್ಧರಾಮಯ್ಯ ಅವರ ಈ ನಡೆಯನ್ನ ನಾನು ಖಂಡಿಸುತ್ತೇನೆ. ಸಿದ್ಧರಾಮಯ್ಯ ಅವರು ಮೊದಲು ಇತಿಹಾಸವನ್ನು ಸರಿಯಾಗಿ ಓದಿಕೊಂಡು ಮಾತನಾಡಲಿ.  ಮುಂದೆ ದಾವೂದ್ ಇಬ್ರಾಹಿಂಗೂ ಕಾಂಗ್ರೆಸ್ ನವರು ಭಾರತ ರತ್ನ ಕೊಡಲಿದ್ದಾರೆಂದು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಮಧ್ಯಂತರ ಚುನಾವಣೆಯ ಪ್ರಶ್ನೆಯೇ ಇಲ್ಲ ಎಂದರು.  ಬೆಂಗಳೂರಿನಲ್ಲಿ ನಡೆಯುತ್ತಿರುವ ಮಹದಾಯಿ ಹೋರಾಟಗಾರರ ಪ್ರತಿಭಟನೆ ವಿಚಾರವಾಗಿ ಮಹದಾಯಿ ಇತ್ಯರ್ಥಕ್ಕೆ ನಮ್ಮ ಕಡೆಯಿಂದ ನಾವು ಪ್ರಯತ್ನ ಮಾಡುತ್ತಿದ್ದೇವೆ.  ಆದಷ್ಟು ಶೀಘ್ರ ಈ ವಿಚಾರ ಇತ್ಯರ್ಥಗೊಳ್ಳಲಿದೆ ಎಂದರು

Advertisement

Udayavani is now on Telegram. Click here to join our channel and stay updated with the latest news.

Next