Advertisement

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

04:06 PM Jun 12, 2021 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟಪಡಿಸಿದ್ದು, ಆ ಬಗ್ಗೆ ಚರ್ಚೆ ಅಪ್ರಸ್ತುತ, ಕೋವಿಡ್ ಸಂಕಷ್ಟದಲ್ಲಿ ಯಾರು ಸಹ ನಾಯಕತ್ವ ಬದಲಾವಣೆ, ಭಿನ್ನ ಅನಿಸಿಕೆ ಕುರಿತು ಹೇಳಿಕೆ ನೀಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಅರವಿಂದ ಬೆಲ್ಲದ ಅವರು, ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದಾಗಿ ನನಗೆ ತಿಳಿಸಿದ್ದಾರೆ. ಬೇರೆಯವರು ಯಾರು ದೆಹಲಿಗೆ ಹೋಗಿದ್ದಾರೆ, ಯಾಕೆ ಹೋಗಿದ್ದಾರೆ ನನಗೆ ಗೊತ್ತಿಲ್ಲ ಎಂದರು.

ಇದನ್ನೂ ಓದಿ:‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

ಜನಪ್ರತಿನಿಧಿಗಳಿಗೆ ಅಧಿಕಾರವೊಂದೇ ಅಲ್ಲ, ಜನರ ಕಣ್ಣೀರು ಒರೆಸುವ ಕೆಲಸ ಮಾಡಬೇಕು. ಇದೀಗ ನಮ್ಮೆಲ್ಲರ ಮುಂದೆ ಇರುವುದು ಕೋವಿಡ್ ನಿಯಂತ್ರಣವಷ್ಟೇ ಎಂದು ಹೇಳಿದರು.

ದೇಶದ ಇಂದಿನ ಸಂಕಷ್ಟಗಳಿಗೆ ಕಾಂಗ್ರೆಸ್ ನ ತುಷ್ಟೀಕರಣ ರಾಜಕಾರಣವೇ ಕಾರಣ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next