Advertisement

ವಿಮಾನ ನಿಲ್ದಾಣ ಬಾಂಬ್ ಪ್ರಕರಣದಲ್ಲಿ ಗಲಭೆಕೋರರು ಭಾಗಿ ಸಾಧ್ಯತೆ : ಪ್ರಹ್ಲಾದ್ ಜೋಶಿ

10:14 AM Jan 22, 2020 | keerthan |

ಹುಬ್ಬಳ್ಳಿ: ದೇಶದಲ್ಲಿ ಅಭದ್ರತೆ ಸೃಷ್ಟಿಸಲು  ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಗಲಭೆಯಲ್ಲಿಯೂ ಪ್ರಯತ್ನ ಮಾಡಿದ್ದರು. ಆ ಮಂಗಳೂರು ಗಲಭೆಯಲ್ಲಿ ಪಾಲ್ಗೊಂಡವರ ಪ್ರೇರಣೆಯಿಂದಲೇ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಪ್ರಕರಣವಾಗಿರುವ ಸಾಧ್ಯತೆಯಿದೆ. ಈ ಬಗ್ಗೆ ತೀವ್ರ ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

Advertisement

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣ ಒಂದು ಆತಂಕಕಾರಿ ವಿಷಯ. ಅವರು ದೇಶ ವಿರೋದಿಗಳು. ತಪ್ಪಿತಸ್ಥರನ್ನ ಬಂಧಿಸಬೇಕು. ರಾಜ್ಯದ ಎಲ್ಲಾ ವಿಮಾನ ಹಾಗೂ ರೈಲ್ವೆ ನಿಲ್ದಾಣಗಳಿಗೆ ಸೂಕ್ತ ಭದ್ರತೆ ನೀಡಬೇಕು ಎಂದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕುಮಾರಸ್ವಾಮಿಯವರದ್ದು ಬೇಜವಾಬ್ದಾರಿತನದ ಹೇಳಿಕೆ. ಇದೊಂದು ನಾಲಾಯಕತನದ ಪರಮಾವಧಿ. ಕುಮಾರಸ್ವಾಮಿಗೆ ಯಾರು ಬಾಂಬ್ ಇಟ್ಟಿದ್ದಾರೆ ಎನ್ನುವುದು ಗೊತ್ತಿದೆ ಅಂದ ಮೇಲೆ ದೂರು ದಾಖಲಿಸಲಿ ಎಂದ ಅವರು ಕುಮಾರಸ್ವಾಮಿಯದ್ದು ದೇಶದ್ರೋಹಿ ಹೇಳಿಕೆ ಎಂದು ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next