Advertisement

ಪ್ರಮೋದ್ ಮಧ್ವರಾಜ್ ಸೇರ್ಪಡೆಗೆ ಜಿಲ್ಲಾ ಬಿಜೆಪಿ ಗ್ರೀನ್ ಸಿಗ್ನಲ್

07:33 PM May 06, 2022 | Team Udayavani |

ಉಡುಪಿ : ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಪಕ್ಷಕ್ಕೆ ಸೇರ್ಪಡೆಯಾಗಲು ಜಿಲ್ಲಾ ಬಿಜೆಪಿಯ ಒಪ್ಪಿಗೆಯನ್ನು ರಾಜ್ಯ ನಾಯಕರಿಗೆ ತಿಳಿಸಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಶುಕ್ರವಾರ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಮೋದ್ ಅವರು ಮುಖ್ಯಮಂತ್ರಿಗಳು ಮತ್ತು ಬಿಜೆಪಿ ರಾಜ್ಯಾಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು.

ನಾವು ಈ ಹಿಂದೆ ಪ್ರಮೋದ್ ಅವರ ಬಿಜೆಪಿ ಸೇರ್ಪಡೆಗೆ ವಿರೋಧಿಸಿದ್ದು, ಹೌದು ಆದರೆ ಈಗ ಕಾರ್ಯಕರ್ತರ ಅಭಿಪ್ರಾಯ ಪಡೆದು ಪಕ್ಷ ಸೇರ್ಪಡೆಗೆ ಒಪ್ಪಿಕೊಂಡಿದ್ದೇವೆ ಎಂದರು.

ಪಕ್ಷಕ್ಕೆ ಕಾರ್ಯಕರ್ತರೇ ಆನೆ ಬಲ, ಯಾವ ನಾಯಕರೂ ಅಲ್ಲ ಎಂದರು. ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಬರುವುದಾಗಿ ಹೇಳಿದ್ದಾರೆ ಎಂದರು.

ಗುತ್ತಿಗೆದಾರ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ಪಕ್ಷ ಸೇರ್ಪಡೆ ಯಾಗುತ್ತಾರಾ ಎಂಬ ಪ್ರಶ್ನೆಗೆ , ಪಕ್ಷದ ತತ್ವ ಸಿದ್ದಾಂತ ಒಪ್ಪಿ ಬಂದರೆ ಸ್ವಾಗತಿಸುತ್ತೇವೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next