Advertisement

ಪ್ರಮೋದ್‌ ಮಧ್ವರಾಜ್‌ ವಿರುದ್ಧ ಅರ್ಜಿ: ದೂರುದಾರರಿಗೆ ದಂಡ   

11:23 PM Sep 20, 2021 | Team Udayavani |

ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ಪ್ರಮೋದ್‌ ಮಧ್ವರಾಜ್‌ ಅವರು ಪಾಲುದಾರರಾಗಿರುವ  “ಮೆ| ರಾಜ್‌ ಫಿಶ್‌ ಮೀಲ್‌ ಮತ್ತು ಆಯಿಲ್‌ ಕಂಪೆನಿ’ಯು ಸತ್ತ ಮೀನುಗಳು ಮತ್ತು ತ್ಯಾಜ್ಯವನ್ನು ಮಲ್ಪೆ  ನದಿಗೆ  ಬಿಡುವ ಮೂಲಕ ಪರಿಸರ ಮಾಲಿನ್ಯ ಉಂಟು ಮಾಡುತ್ತಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಉದ್ಯಮಿಗೆ ಹೈಕೋರ್ಟ್‌ 10 ಲಕ್ಷ ರೂ. ದಂಡ ವಿಧಿಸಿದೆ.

Advertisement

ಈ ವಿಚಾರವಾಗಿ ಉದ್ಯಮಿ ಪ್ರಶಾಂತ್‌ ಅಮೀನ್‌ ಸಲ್ಲಿಸಿದ್ದ ಸಾರ್ವ ಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾ| ಸತೀಶ್‌ ಚಂದ್ರ ಶರ್ಮ  ನೇತೃತ್ವದ ವಿಭಾಗೀಯ ನ್ಯಾಯಪೀಠವು ಅರ್ಜಿಯನ್ನು  ವಜಾಗೊಳಿಸಿ ಅವರಿರಿಗೆ 10 ಲಕ್ಷ ರೂ. ದಂಡ ವಿಧಿಸಿತು.

ಅಲ್ಲದೇ  ದಂಡದ ಮೊತ್ತವನ್ನು ಒಂದು ತಿಂಗಳಲ್ಲಿ ಕರ್ನಾಟಕ ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಜಮೆ ಮಾಡಬೇಕು. ಆ ಹಣವನ್ನು ಕೋವಿಡ್‌ನಿಂದ ಸಂಕಷ್ಟ ಎದುರಿಸುತ್ತಿರುವ ವಕೀಲರ ಗುಮಾಸ್ತರ ಅನುಕೂಲಕ್ಕೆ ಬಳಸಬೇಕು. ಒಂದು ತಿಂಗಳಲ್ಲಿ ಹಣ ಪಾವತಿಸ ದಿದ್ದರೆ ಉಡುಪಿ ಜಿಲ್ಲಾಧಿ ಕಾರಿಯು  ಮೊತ್ತವನ್ನು  ವಸೂಲು ಮಾಡಬೇಕು ಎಂದು ಆದೇಶಿಸಿತು.

Advertisement

Udayavani is now on Telegram. Click here to join our channel and stay updated with the latest news.

Next