Advertisement

ಪ್ರಮೋದ್‌ ಮಧ್ವರಾಜ್‌ ಪುಣೆ ಬಂಟರ ಭವನಕ್ಕೆ ಭೇಟಿ

03:15 PM May 03, 2019 | Team Udayavani |

ಪುಣೆ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್‌ – ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಪುಣೆ ಬಂಟರ ಭವನಕ್ಕೆ ಭೇಟಿ ನೀಡಿದರು.

Advertisement

ಅವರನ್ನು ಪುಣೆ ಬಂಟರ ಸಂಘದ ಪದಾಧಿಕಾರಿಗಳು ಸ್ವಾಗತಿಸಿ, ಶಾಲು ಹೊದೆಸಿ, ನೆನಪಿನ ಕಾಣಿಕೆ ನೀಡಿ ಸಮ್ಮಾನಿಸಿದರು. ಮೊದಲಿಗೆ ಭವನದ ಆರತಿ ಶಶಿಕಿರಣ್‌ ಶೆಟ್ಟಿ ಚಾವಡಿಯಲ್ಲಿ ದೇವರಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು.

ಅನಂತರ ಪೂರ್ತಿ ಭವನವನ್ನು ವೀಕ್ಷಿಸಿದ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು, ಭವನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಪುಣೆಯ ಬಂಟ- ಬಾಂಧವರು ಅದ್ಭುತವಾದ ಬಲು ಸುಂದರವಾದ ಸುಸಜ್ಜಿತವಾದ ಬಂಟರ ಭವನವನ್ನು ನಿರ್ಮಿಸಿದ್ದು, ಇದನ್ನು ಕಂಡಾಗ ಹೊಸ ಅನುಭವವಾಗುತ್ತಿದೆ. ವಿವಿಧ ಸಮಾಜಗಳ ಸಮುದಾಯಗಳ ಹಲವಾರು ಭವನಗಳನ್ನು ನೋಡಿ ದ್ದೇನೆ. ಬಹುಶ ಇಂಥ ಸುಂದರ ವಾದ ಭವನವನ್ನು ಇನ್ನೆಲ್ಲೂ ಕಂಡಿಲ್ಲ. ಪುಣೆಯ ಬಂಟರ ಸಂಘದ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಕಾರ್ಯ ನಿಜವಾಗಿಯೂ ಶ್ಲಾಘನೀಯವಾಗಿದೆ ಎಂದು ನುಡಿದರು.

ಈ ಸಂದರ್ಭ ಪುಣೆ ಬಂಟರ ಸಂಘದ ಉಪಾಧ್ಯಕ್ಷರಾದ ಸತೀಶ್‌ ಶೆಟ್ಟಿ, ಸಾಂಸ್ಕೃತಿಕ ಸಮಿತಿ

ಕಾರ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಕಳತ್ತೂರು, ಕ್ಯಾಟರಿಂಗ್‌ ಸಮಿತಿ ಕಾರ್ಯಾಧ್ಯಕ್ಷ ತಾರಾನಾಥ ಕೆ. ರೈ ಮೇಗಿನಗುತ್ತು, ಸುಜಿತ್‌ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಸತೀಶ್‌ ಶೆಟ್ಟಿ, ಮಹಿಳಾ ವಿಭಾಗದ ಕೋಶಾಧಿಕಾರಿ ಶಮ್ಮಿ ಅಜಿತ್‌ ಹೆಗ್ಡೆ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವಿ ಕೆ. ಶೆಟ್ಟಿ, ಕಾರ್ಯದರ್ಶಿ ಸುಧಾಕರ ಸಿ. ಶೆಟ್ಟಿ, ಜಗದೀಶ್‌ ಬಿ. ಶೆಟ್ಟಿ, ಸಂಪತ್‌ ಶೆಟ್ಟಿ ,ಜಗದೀಶ್‌ ಶೆಟ್ಟಿ, ಅರುಣ್‌ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಉಪಕಾರ್ಯಾಧ್ಯಕ್ಷ ರಾಜಾರಾಮ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Advertisement

ಚಿತ್ರ-ವರದಿ :ಕಿರಣ್‌ ಬಿ. ರೈ ಕರ್ನೂರು

Advertisement

Udayavani is now on Telegram. Click here to join our channel and stay updated with the latest news.

Next