Advertisement
ಅವರು ತಾಲೂಕಿನ ಅಂಜನಾದ್ರಿ ಹನುಮಮಾಲಾವಿಸರ್ಜನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
Related Articles
Advertisement
ರಾಜ್ಯದಲ್ಲಿ ರೌಡಿಶೀಟರ್ಗಳನ್ನು, ಗೂಂಡಾಗಳನ್ನು ಹಾಗೂ ಭಯೋತ್ಪಾದಕರನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗುತ್ತಿದೆ. ಇದು ಬಿಜೆಪಿಗೆ ಶೋಭೆ ತರುವುದಿಲ್ಲ. ಕಾಂಗ್ರೆಸ್ ಹಾದಿಯಲ್ಲಿ ಬಿಜೆಪಿ ಸಾಗುತ್ತಿದೆ. ಸಂಘ ಪರಿವಾರದ ಹಿರಿಯ ನಾಯಕರು ಇದನ್ನು ಸರಿಪಡಿಸಬೇಕು ಎಂದರು.
ರಾಜ್ಯದಲ್ಲಿ ದುಡ್ಡಿನ ಆಸೆಗೆ ಬಿಜೆಪಿ ಗೂಂಡಾಗಳ ಹಿಂದೆ ಬಿದ್ದಿದೆ. ಬಿಜೆಪಿಗೆ ನಮ್ಮಂತಹ ಹಿಂದೂಪರ ಸಂಘಟನೆ ಹೋರಾಟಗಾರರು ಬೇಕಿಲ್ಲ. ಆದ್ದರಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 25 ಕ್ಷೇತ್ರಗಳಲ್ಲಿ ಶ್ರೀರಾಮಸೇನೆ ಸ್ಪರ್ಧಿಸಲಿದೆ. ನಾನೂ ಸಹ ಸ್ಪರ್ಧಿಸುತ್ತೇನೆ. ಆದರೆ, ಕ್ಷೇತ್ರ ಇನ್ನೂ ಅಂತಿಮವಾಗಿಲ್ಲ ಎಂದು ಮುತಾಲಿಕ್ ಹೇಳಿದರು.ಧಾರ್ಮಿಕ ದತ್ತಿ ಇಲಾಖೆ ನಿಯಮದ ಅನ್ವಯ ದೇವಸ್ಥಾನದ 200 ಮೀ. ದೂರದಲ್ಲಿ ಯಾವುದೇ ಕ್ರಿಶ್ಚಿಯನ್, ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು. ಸರ್ಕಾರ ಇದನ್ನು ಪಾಲಿಸಬೇಕು ಎಂದರು. ಈ ಹಿಂದೆ ಹನುಮ ಮಾಲಾಧಾರಿಗಳನ್ನು ಗೂಂಡಾಗಳು ಎಂದು ಕರೆದು ಇದೀಗ ಚುನಾವಣೆ ಸಂದರ್ಭದಲ್ಲಿ ಹಿಂದೂಗಳನ್ನು ಓಲೈಸಲು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಶುಭಾಶಯ ಕೋರಿದ ಫ್ಲೆಕ್ಸ್ ಹಾಕಿರುವುದು ಮತ ರಾಜಕೀಯ. ಹಿಂದೂಗಳು ಇದಕ್ಕೆ ಬಲಿಯಾಗಬಾರದು. ಇಕ್ಬಾಲ್ ಅನ್ಸಾರಿಗೆ ಹನುಮನ ಶಾಪ ತಟ್ಟಿದೆ ಎಂದು ಮುತಾಲಿಕ್ ಹೇಳಿದರು. ಇದನ್ನೂ ಓದಿ: ಚುನಾವಣೋತ್ತರ ಸಮೀಕ್ಷೆ: ಗುಜರಾತ್ನಲ್ಲಿ 7 ನೇ ಅವಧಿಗೆ ಬಿಜೆಪಿ ; ಹಿಮಾಚಲದಲ್ಲಿ ಜಿದ್ದಾಜಿದ್ದು