Advertisement

ಪ್ರಮೋದ್ ಮತಾಲಿಕ್ ಗೆ ಜೀವ ಬೆದರಿಕೆ ಸಂದೇಶ: ದೂರು ದಾಖಲು

10:20 PM Dec 01, 2022 | Team Udayavani |

ಧಾರವಾಡ: ರಾಜ್ಯ ಸರ್ಕಾರ 10 ಮುಸ್ಲಿಂ ಕಾಲೇಜುಗಳಿಗೆ ಅನುಮತಿ ಕೊಡಲು ಮುಂದಾಗಿರುವ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಸಂದೇಶವೊಂದು ಬಂದಿದೆ.

Advertisement

ಮೊಬೈಲ್‌ ನಂಬರ್‌ನಿಂದ ವಾಟ್ಸಪ್‌ ವಾಯ್ಸ್ ಮೆಸೇಜ್ ಒಂದು ಬಂದಿದ್ದು, ಇದರಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಮೇಲೆ ಧಾರವಾಡದ ಉಪನಗರ ಠಾಣೆಯಲ್ಲಿ ಮುತಾಲಿಕ್ ಅವರು ದೂರು ದಾಖಲಿಸಿದ್ದಾರೆ.

ಈ ಹಿಂದೆ ಮಸಿ ಬಳಿಸಿಕೊಂಡಿರುವೆ. ಇನ್ನು ಮೇಲಾದರೂ ನಮ್ಮ ಸಮುದಾಯದ ಬಗ್ಗೆ ಮಾತನಾಡಬೇಡ. ನಮ್ಮ ಸಮುದಾಯದ ಬಗ್ಗೆ ಮಾತನಾಡೋಕೆ ನೀನು ಯಾರು ಎಂದು ಅಶ್ಲೀಲ ಪದಗಳನ್ನು ಬಳಕೆ ಮಾಡಿ ಮುತಾಲಿಕ್‌ಗೆ ಆ ವ್ಯಕ್ತಿ ಬೆದರಿಕೆ ಹಾಕಿದ್ದಾನೆ.

ಫೋನ್ ನಂಬರ್ ಮೇಲೆ ತನಿಖೆ ನಡೆಸುವಂತೆ ಮುತಾಲಿಕ್ ಅವರು ಗುರುವಾರ ದೂರು ದಾಖಲು ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next