Advertisement

Mangaluru ಪ್ರಮೋದ್‌ ಮುತಾಲಿಕ್‌ಗೆ ನಿಷೇಧ: ಶ್ರೀರಾಮ ಸೇನೆ ಖಂಡನೆ

11:20 PM Dec 25, 2023 | |

ಮಂಗಳೂರು: ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಹಾಗೂ ರಾಜ್ಯ ಅಧ್ಯಕ್ಷ ಗಂಗಾಧರ್‌ ಕುಲಕರ್ಣಿ ಅವರು ಚಿಕ್ಕಮಗಳೂರು ಜಿಲ್ಲೆ ಪ್ರವೇಶಿಸಲು ಚಿಕ್ಕಮಗಳೂರು ಜಿಲ್ಲಾಡಳಿತ ನಿಷೇಧ ಹೇರಿರುವುದನ್ನು ಶ್ರೀರಾಮಸೇನೆ ಖಂಡಿಸಿದೆ.

Advertisement

ಶ್ರೀ ದತ್ತಾತ್ರೇಯರ ಜಯಂತಿ ದಿನದಂದೇ ಪ್ರವೇಶ ನಿಷೇಧ ಮಾಡಿರುವುದು ಅತ್ಯಂತ ನೋವು ತಂದಿದೆ. ಇಂತಹ ನಿರ್ಧಾರ ಜಿಲ್ಲಾಡಳಿತಕ್ಕೆ ಶೋಭೆ ತರುವುದಿಲ್ಲ.

ಹಿಂದೂ ವಿರೋಧಿ ನೀತಿ ಕೈಬಿಡದಿದ್ದರೆ ಹೋರಾಟ ಅನಿವಾರ್ಯ ಎಂದು ಶ್ರೀರಾಮ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್‌ ಶೆಟ್ಟಿ ಅಡ್ಯಾರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next