Advertisement
ಬಳಿಕ ಮಾತನಾಡಿದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಣಬ್ ಮುಖರ್ಜಿ ದೊಡ್ಡ ವಿಚಾರವಾದಿ. 1977ರಲ್ಲಿಯೇ ನನಗೆ ಅವರ ಪರಿಚಯವಿತ್ತು. 1978ರಲ್ಲಿ ಇಂದಿರಾಗಾಂಧಿ ಚಿಕ್ಕಮಗಳೂರಿನಲ್ಲಿ ಸ್ಪರ್ಧಿಸಿದ್ದರು. ಆಗ ಪ್ರಣಬ್ ಜೊತೆ ನಾವು ಕೆಲಸ ಮಾಡಿದ್ದೆವು ಎಂದು ನೆನಪಿಸಿಕೊಂಡಿದ್ದಾರೆ.
Related Articles
Advertisement
ಅವರ ಮಗ ಅಭಿಜಿತ್ ಮುಖರ್ಜಿ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಮಾತನಾಡುವಾಗ ಸಿದ್ಧತೆ ಮಾಡಿಕೊಂಡೇ ಬರುತ್ತಿದ್ದರು.ಮಗನಿಗೆ ಬೆಂಬಲಿಸುವಂತೆ ಪದೇ ಪದೇ ಪ್ರಣಬ್ ಹೇಳುತ್ತಿದ್ರು. ಅಭಿಜಿತ್ ಉತ್ತಮ ಸಂಭಾವಿತ ವ್ಯಕ್ತಿ. ಪ್ರಣಬ್ ಕಾಂಗ್ರೆಸ್ ಪಕ್ಷವನ್ನು ಎತ್ತರಕ್ಕೇರಿಸಿದವರು. ಅವರ ನಿಧನ ತುಂಬಲಾರದ ನಷ್ಟವಾಗಿದೆ. ನನಗೂ ಅವರ ನಿಧನ ಸಾಕಷ್ಟು ನೋವು ತಂದಿದೆ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.
ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಮಾತನಾಡಿ, 91/92 ರಲ್ಲಿ ನಾನು ಸಂಸತ್ತಿಗೆ ಆಯ್ಕೆಯಾಗಿದ್ದೆ. ಪ್ರಣಬ್ ಅವರನ್ನ ಸಂಪುಟಕ್ಕೆ ಸೇರಿಸಿಕೊಂಡಿದ್ದರು. ಆಗಷ್ಟೇ ನಾನು ಅವರ ಸಂಪರ್ಕಕ್ಕೆ ಬಂದಿದ್ದೆ. ಎನ್ ಡಿಎ ಸರ್ಕಾರ ಕೆಜಿಎಫ್ ಕ್ಲೋಸ್ ಮಾಡಿತ್ತು. ಯುಪಿಎ ಅಧಿಕಾರಕ್ಕೆ ಬಂದಾಗ ಮತ್ತೆ ರೀ- ಓಪನ್ ಬಗ್ಗೆ ಚರ್ಚೆ ನಡೆದಿತ್ತು. ನಾನು ಕೇಂದ್ರದಲ್ಲಿ ರಾಜ್ಯಸಚಿವನಾಗಿದ್ದೆ. ಸರ್ಕಾರ ಹಣಹಾಕುವುದು ಬೇಡ. ರೀ-ಓಪನ್ ಮಾಡಿ ಎಂದಿದ್ದೆ. ಆದರೆ ಚಿದಂಬರಂ ಸುತಾರಾಂ ಒಪ್ಪಲಿಲ್ಲ. ನಂತರ ಪ್ರಣಬ್ ಮುಖರ್ಜಿ ಅದಕ್ಕೆ ಬೆಂಬಲಿಸಿದ್ದರು. ಕೆಜಿಎಫ್ ರೀ-ಓಪನ್ ಗೆ ಅವಕಾಶವೂ ಸಿಕ್ಕಿತ್ತು. ಮತ್ತೊಮ್ಮೆ ಪವರ್ ಲೂಮ್ ಬಗ್ಗೆಯೂ ಪ್ರಣಬ್ ಬೆಂಬಲಿಸಿದ್ದರು ಎಂದು ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಹೇಳಿಕೆ ನೀಡಿದ್ದಾರೆ.
ಆರ್ ಎಸ್ ಎಸ್ ಗೆ ಹೋಗುವ ಮೊದಲು ಅವರನ್ನ ಭೇಟಿ ಮಾಡಿದ್ದೆ. ಇಲ್ಲಿಯವರೆಗೆ ನೀವು ಪಕ್ಷವನ್ನ ಕಟ್ಟಿದ್ದೀರಾ. ಈಗ ಕೋಮುವಾದಿ ಪಕ್ಷಕ್ಕೆಹೋಗುತ್ತಿದ್ದೀರಿ. ನಿಮ್ಮ ಹೆಸರಿಗೆ ಕಳಂಕ ಬರುವುದಿಲ್ಲವೇ ಎಂದು ಕೇಳಿದ್ದೆ. ಅವರ ಜೊತೆ ಅರ್ಧ ತಾಸು ಮಾತುಕತೆ ನಡೆಸಿದ್ದೆ. ಸಂದರ್ಭ ಬಂದಾಗ ಒಪ್ಪಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದರು. ಇವತ್ತು ಅವರು ನಮ್ಮನ್ನು ಅಗಲಿದ್ದಾರೆ. ಇಡೀ ದೇಶ ಅವರ ನಿಧನ ನೋವಿನಲ್ಲಿದೆ ಎಂದು ಮುನಿಯಪ್ಪ ತಿಳಿಸಿದರು.