Advertisement

ಸ್ಪರ್ಧೆ ಪ್ರಕಟಿಸಿದ ಪ್ರಸಾದ್‌

01:20 AM Mar 19, 2019 | Team Udayavani |

ಮೈಸೂರು: ಪಕ್ಷದ ನಾಯಕರೊಂದಿಗೆ ಚರ್ಚಿಸಲು ಬೆಂಗಳೂರಿಗೆ ತೆರಳಿದ್ದ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್‌, ಚಾಮರಾಜ ನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದರು.

Advertisement

ಸೋಮವಾರ ಬೆಂಗಳೂರಿನಿಂದ ಆಗಮಿಸಿದ ಅವರನ್ನು ರೈಲು ನಿಲ್ದಾಣದಲ್ಲಿ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಘೋಷಣೆ ಕೂಗಿ ಅದ್ಧೂರಿಯಾಗಿ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಶ್ರೀನಿವಾಸ ಪ್ರಸಾದ್‌, ನನಗೆ ಚುನಾವಣೆಗೆ ಸ್ಪರ್ಧಿಸುವ ಆಸೆ ಇರಲಿಲ್ಲ. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರ ಒತ್ತಾಯದಿಂದ ಸ್ಪರ್ಧಿಸುತ್ತಿದ್ದೇನೆ. ಎಲ್ಲರ ಜತೆ ಮಾತನಾಡಿ ಒಳ್ಳೆಯ ದಿನ ನಾಮಪತ್ರ ಸಲ್ಲಿಸುತ್ತೇನೆಂದು ತಿಳಿಸಿದರು.

ನನ್ನನ್ನು ಮಂತ್ರಿ ಮಂಡಲದಿಂದ ಯಾರು ಕೈ ಬಿಟ್ಟರೋ ಅವರ ಸ್ಥಿತಿ ಇಂದು ಏನಾಗಿದೆ ಎಂದು ನೋಡಿದ್ದೀರಿ, ನಾನೇ ಮುಂದಿನ ಮುಖ್ಯಮಂತ್ರಿ ಎಂದು ತಿರುಗಾಡುತ್ತಿದ್ದವರು ಚಾಮುಂಡೇ ಶ್ವರಿ ಕ್ಷೇತ್ರದಲ್ಲಿ 35 ಸಾವಿರ ಮತಗಳ ಅಂತರದಿಂದ ಸೋತರು.
– ವಿ.ಶ್ರೀನಿವಾಸ ಪ್ರಸಾದ್‌, ಮಾಜಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next