Advertisement

ಕಾಂಗ್ರೆಸ್ ಆಫರ್ ತಿರಸ್ಕರಿಸಿದ ಪ್ರಶಾಂತ್ ಕಿಶೋರ್; ಕೈ ಪಕ್ಷ ಸೇರಲ್ಲ ಎಂದ ತಂತ್ರಗಾರ!

04:54 PM Apr 26, 2022 | Team Udayavani |

ಹೊಸದಿಲ್ಲಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ತಮಗೆ ಕಾಂಗ್ರೆಸ್ ಪಕ್ಷ ನೀಡಿದ್ದ ಆಫರ್ ನ್ನು ತಿರಸ್ಕರಿಸಿದ್ದಾರೆ. ತಾವು ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

Advertisement

ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಈ ಬಗ್ಗೆ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರಶಾಂತ್ ಕಿಶೋರ್ ಅವರು ಅವರು ಈ ತಿಂಗಳ ಆರಂಭದಲ್ಲಿ ಕಾಂಗ್ರೆಸ್ ಮುಖಂಡರನ್ನು ಅದರಲ್ಲೂ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಹಲವು ಬಾರಿ ಭೇಟಿಯಾಗಿ 2024ರ ಲೋಕಸಭೆ ಚುನಾವಣೆಗೆ ನೀಲನಕ್ಷೆ ಸಿದ್ದಪಡಿಸಿ ಚರ್ಚೆ ನಡೆಸಿದ್ದರು. ಈ ಬೆಳವಣಿಗೆಗಳು ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುತ್ತಾರೆಂಬ ಕೂಗಿಗೆ ಮತ್ತಷ್ಟು ಪುಷ್ಠಿ ನೀಡಿದ್ದವು.

ಪ್ರಶಾಂತ್ ಕಿಶೋರ್ ನೀಡಿದ್ದ ಹಲವು ಅಂಶಗಳ ಬಗ್ಗೆ ಚರ್ಚೆ ನಡೆಸಲು ಸೋನಿಯಾ ಗಾಂಧಿ ಎಂಟು ಮಂದಿ ಸದಸ್ಯರ ತಂಡವನ್ನು ರಚಿಸಿದ್ದರು.

ಇದನ್ನೂ ಓದಿ:ಪಾಕಿಸ್ತಾನ: ಕರಾಚಿ ಯೂನಿರ್ವಸಿಟಿ ಆವರಣದಲ್ಲಿ ಸ್ಫೋಟ, ನಾಲ್ವರು ಸಾವು, ಹಲವರು ಗಂಭೀರ

Advertisement

ಪ್ರಶಾಂತ್ ಕಿಶೋರ್ ಜೊತೆಗಿನ ಚರ್ಚೆಗಳ ಬಳಿಕ ಅಧ್ಯಕ್ಷರು ಸಶಕ್ತ ಕ್ರಿಯಾ ತಂಡ -2024ನ್ನು ರಚಿಸಿ, ನಿರ್ದಿಷ್ಟ ಜವಾಬ್ದಾರಿಯೊಂದಿಗೆ ಗುಂಪಿನ ಭಾಗವಾಗಿ ಪಕ್ಷಕ್ಕೆ ಸೇರಲು ಅವರನ್ನು ಆಹ್ವಾನಿಸಿದರು. ಆದರೆ ಪ್ರಶಾಂತ್ ಇದನ್ನು ತಿರಸ್ಕರಿಸಿದ್ದಾರೆ. ಅವರ ಸಲಹೆಗಳಿಗೆ ಧನ್ಯವಾದಗಳು ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

“ಇಎಜಿ (ಎಂಪವರ್ಡ್ ಆಕ್ಷನ್ ಗ್ರೂಪ್) ಯ ಭಾಗವಾಗಿ ಪಕ್ಷಕ್ಕೆ ಸೇರಲು ಮತ್ತು ಚುನಾವಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಕಾಂಗ್ರೆಸ್‌ ನ ಪ್ರಸ್ತಾಪವನ್ನು ನಾನು ನಿರಾಕರಿಸಿದೆ. ನನ್ನ ಅಭಿಪ್ರಾಯದಲ್ಲಿ, ನನಗಿಂತ ಹೆಚ್ಚಾಗಿ, ಆಳವಾಗಿ ಬೇರೂರಿರುವ ರಚನಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಪಕ್ಷಕ್ಕೆ ನಾಯಕತ್ವ ಮತ್ತು ಸಾಮೂಹಿಕ ಇಚ್ಛಾಶಕ್ತಿಯ ಅಗತ್ಯವಿದೆ” ಎಂದು ಪ್ರಶಾಂತ್ ಕಿಶೋರ್ ಹೇಳಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next