Advertisement

ಜೆಡಿಯುನಿಂದ ಪ್ರಶಾಂತ್ ಕಿಶೋರ್,  ಪವನ್ ವರ್ಮಾ ಉಚ್ಚಾಟನೆ

08:28 AM Jan 30, 2020 | keerthan |

ಪಾಟ್ನಾ: ಚುನಾವಣಾ ತಂತ್ರಗಾರಿಕೆಯಿಂದ ಪ್ರಸಿದ್ದಿಯಾಗಿದ್ದ ಪ್ರಶಾಂತ್ ಕಿಶೋರ್ ರನ್ನು ಜೆಡಿಯು ಪಕ್ಷದಿಂದ ಉಚ್ಛಾಟಿಸಲಾಗಿದೆ. ಇದರೊಂದಿಗೆ ಬಂಡಾಯ ನಾಯಕ ಪವನ್ ವರ್ಮಾರನ್ನು ಕೂಡಾ ಪಕ್ಷದಿಂದ ಹೊರಹಾಕಲಾಗಿದೆ.

Advertisement

ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಜೊತೆ ಮನಸ್ಥಾಪ ಹೊಂದಿದ್ದ ಪ್ರಶಾಂತ್ ಕಿಶೋರ್ ಸಾರ್ವಜನಿಕವಾಗಿ ನಿತೀಶ್ ವಿರುದ್ಧ ಹೇಳಿಕೆ ನೀಡುತ್ತಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆಗೆ ನಿತೀಶ್ ಬೆಂಬಲ ನೀಡಿದ್ದು ಪ್ರಶಾಂತ್ ಕಿಶೋರ್ ಅಸಮಧಾನಕ್ಕೆ ಕಾರಣವಾಗಿತ್ತು. ಇದರಿಂದ ಕೆರಳಿದ್ದ ನಿತೀಶ್ ಕುಮಾರ್ ಪಕ್ಷ ಬಿಟ್ಟು ಹೋಗುವಂತೆ ಪ್ರಶಾಂತ್ ಕಿಶೋರ್ ಗೆ ಹೇಳಿದ್ದರು.

ಪ್ರಶಾಂತ್ ಕಿಶೋರ್ ಮತ್ತು ಪವನ್ ವರ್ಮಾ ಪಕ್ಷದ ನಿಯಮಗಳಿಗೆ ಯಾವುದೇ ಗೌರವ ನೀಡಲಿಲ್ಲ. ಹೀಗಾಗಿ ಅವರನ್ನು ಅವರ ಸ್ಥಾನಗಳಿಂದ ಮತ್ತು ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಜೆಡಿಯು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next