Advertisement

ಪೊಲೀಸ್ ಭದ್ರತೆಯಲ್ಲಿ ವಿಧಾನಸೌಧಕ್ಕೆ ಬಂದ ಆನಂದ್ ಸಿಂಗ್, ಪ್ರತಾಪ್ ಗೌಡ

02:49 PM May 19, 2018 | Sharanya Alva |

ಬೆಂಗಳೂರು: ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿದ್ದ ಕಾಂಗ್ರೆಸ್ ಪಕ್ಷದ ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಪೊಲೀಸ್ ಭದ್ರತೆಯೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಜಯನಗರ ಶಾಸಕ ಆನಂದ್ ಸಿಂಗ್ ಕೂಡಾ ವಿಧಾನಸಭೆಗೆ ಆಗಮಿಸಿದ್ದಾರೆ.

Advertisement

ಶಾಸಕರಿಂದಲೇ ಕಿಡ್ನಾಪ್ ಆದ ಮಾಹಿತಿ ಕೊಡಿಸ್ತೀವಿ ಎಂದು ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ. ಕಾರಿನಿಂದ ಪಾಟೀಲ್ ಇಳಿಯುತ್ತಿದ್ದಂತೆಯೇ ಡಿಕೆಶಿ ಅವರನ್ನು ತಮ್ಮ ಬಳಿಗೆ ಎಳೆದುಕೊಂಡ ಘಟನೆ ನಡೆಯಿತು. ಬಳಿಕ ಪ್ರತಾಪ್ ಗೌಡ ಪಾಟೀಲ್ ಅವರನ್ನು ಡಿಕೆಶಿ ವಿಧಾನಸಭೆಗೆ ಕರೆದೊಯ್ದರು.

ವಿಧಾನಸೌಧದ ಮೊಗಸಾಲೆಯಲ್ಲಿ ಕುಳಿತಿದ್ದ ಪ್ರತಾಪ್ ಗೌಡ ಪಾಟೀಲ್ ಜೇಬಿಗೆ ಡಿಕೆಶಿ ವಿಪ್ ಪತ್ರವನ್ನು ಇಟ್ಟಿದ್ದಾರೆ. ವಿಧಾನಸಭೆಯ ಅಧಿವೇಶನದಲ್ಲಿ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ನೇತೃತ್ವದಲ್ಲಿ ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next