Advertisement

ಹಿಂದೂ ದೇವಾಲಯ ರಕ್ಷಣೆಗೆ ಪ್ರತ್ಯೇಕ ಬೋರ್ಡ್ ರಚನೆಗೆ ಪ್ರತಾಪ್ ಸಿಂಹ ಆಗ್ರಹ

12:28 PM Sep 13, 2021 | Team Udayavani |

ಮೈಸೂರು: ವಕ್ಫ್ ಬೋರ್ಡ್ ಮಾದರಿಯಲ್ಲಿ, ಹಿಂದೂ ದೇವಾಲಯ ರಕ್ಷಣೆಗೆ ಒಂದು ಪ್ರತ್ಯೇಕ ಬೋರ್ಡ್ ಮಾಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದರು.

Advertisement

ದೇವಾಲಯ ತೆರವು ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇವತ್ತು ಬೆಳಗ್ಗೆ ದೂರವಾಣಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆ ಮಾತಾಡಿದ್ದೇನೆ. ನ್ಯಾಯಾಲಯದ ಆದೇಶವನ್ನು ಸಂಪೂರ್ಣವಾಗಿ ಅವರಿಗೆ ವಿವರಿಸಿದ್ದೇನೆ. ನ್ಯಾಯಾಲಯದ ಆದೇಶದಲ್ಲಿ ಎಲ್ಲೂ ಏಕಾಏಕಿ ದೇವಸ್ಥಾನ ತೆರವಿಗೆ ಸೂಚಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದೇನೆ ಎಂದರು.

ಇದನ್ನೂ ಓದಿ:ಅಭಿಯಾನ; ಬುರ್ಖಾ ಧರಿಸಬೇಕೆಂಬ ತಾಲಿಬಾನ್ ಆದೇಶಕ್ಕೆ ಸಡ್ಡು ಹೊಡೆದ ಅಫ್ಘಾನ್ ಮಹಿಳೆಯರು…

ನಂಜನಗೂಡಿನ ತಹಶೀಲ್ದಾರ್ ವಿರುದ್ದ ಕ್ರಮ ಕೈಗೊಳ್ಳಬೇಕು, ಜಿಲ್ಲಾಡಳಿತಕ್ಕೂ ಸೂಚನೆ ನೀಡಬೇಕು ಎಂದು ಸಿಎಂ ಬಳಿ ಕೇಳಿದ್ದೇನೆ. ಏಕಾಏಕಿ ದೇವಸ್ಥಾನ ತೆರವು ಮಾಡಿದ ಅಧಿಕಾರಿಗಳ ವಿರುದ್ದ ತಕ್ಷಣಕ್ಕೆ ಕ್ರಮ ಕೈಗೊಳ್ಳುತ್ತೇನೆ. ದೇವಸ್ಥಾನದ ರಕ್ಷಣೆಗೆ ಹೊಸ ಆದೇಶ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next