Advertisement

HDK ಕಾಲಿಗೆ ಬಿದ್ದು ಧನ್ಯವಾದ ತಿಳಿಸಿದ ಪ್ರತಾಪ್‌ಸಿಂಹ

09:51 PM Jan 12, 2024 | Team Udayavani |

ರಾಮನಗರ:ಬಿಡದಿಯ ತೋಟದ ಮನೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಸಹಾಯ ಮಾಡಿದ್ದಕ್ಕೆ ಮೈಸೂರು-ಮಡಿಕೇರಿ ಸಂಸದ ಪ್ರತಾಪ್‌ಸಿಂಹ ಧನ್ಯವಾದ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಇತ್ತೀಚಿಗೆ ಪ್ರತಾಪ್‌ಸಿಂಹ ಸಹೋದರನ ವಿರುದ್ಧ ಕಾಡಿನಲ್ಲಿ ಮರಕಡಿದ ಪ್ರಕರಣ ದಾಖಲು ಮಾಡಿದ್ದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪ್ರತಾಪ್‌ಸಿಂಹ ಪರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟ್ ಬೀಸಿದ್ದರು. ”ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ಕುಮಾರಣ್ಣನಿಗೆ ಧನ್ಯವಾದಗಳನ್ನು ಖುದ್ದು ತಿಳಿಸಿದ ಸಂದರ್ಭ”ಎಂದು ಎಕ್ಸ್ ನಲ್ಲಿ ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದಾರೆ.

ಭೇಟಿ ಸಮಯದಲ್ಲಿ ಇಬ್ಬರ ನಡುವೆ ಸುಮಾರು ಒಂದು ತಾಸುಗಳ ಕಾಲ ಪ್ರತ್ಯೇಕವಾಗಿ ಲೋಕಸಭಾ ಚುನಾವಣೆ ಸಂಬಂಧ, ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆದಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿರುವ ಹಿನ್ನೆಲೆ ಮೈಸೂರು-ಕೊಡಗು ಕ್ಷೇತ್ರಕ್ಕೆ ಜೆಡಿಎಸ್ ಬೇಡಿಕೆ ಇಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ವಿಚಾರವಾಗಿ, ಲೋಕಸಭೆ ಎಲೆಕ್ಷನ್ ಗೆ ಸಹಕಾರ ನೀಡುವಂತೆ ಪ್ರತಾಪ್ ಸಿಂಹ ಮನವಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next