Advertisement

Nimmellara Ashirvada Movie; ನಿಮ್ಮ ‘ಆಶೀರ್ವಾದ’ವೇ ಇವರಿಗೆ ಶ್ರೀರಕ್ಷೆ

01:29 PM Jul 11, 2023 | Team Udayavani |

“ನಿಮ್ಮೆಲ್ಲರ ಆಶೀರ್ವಾದ’ ಎಂಬ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದ್ದು, ಜು.21ರಂದು ತೆರೆಕಾಣುತ್ತಿದೆ. ವರುಣ್‌ ಸಿನಿ ಕ್ರಿಯೇಶನ್ಸ್‌ನಡಿ ವರುಣ್‌ ಹೆಗ್ಡೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ರವಿಕಿರಣ್‌ ನಿರ್ದೇಶನ ಮಾಡಿದ್ದಾರೆ.

Advertisement

ಚಿತ್ರದ ಬಗ್ಗೆ ಮಾತನಾಡುವ ವರುಣ್‌ ಹೆಗ್ಡೆ, “ನನ್ನ ಸ್ನೇಹಿತ ಕತೆ ಬರೆಯುತ್ತಿದ್ದ. ಕತೆ ಕೇಳಿ ಖುಷಿ ಆಯ್ತು. ಔಟ್‌ ಅಂಡ್‌ ಔಟ್‌ ಎಂಟರ್‌ ಟೈನ್ಮೆಂಟ್‌ ಸಿನಿಮಾವಾಗಿರುವ ಈ ಸಿನಿಮಾದಲ್ಲಿ ಕಾಮಿಡಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇದೊಂದು ಫ್ಯಾಮಿಲಿ ಎಂಟರ್‌ಟೈನರ್‌. ನನ್ನ ಹಾಗೂ ನಿರ್ದೇಶಕನ ಸ್ನೇಹಕ್ಕಿಂತ ಕತೆ ನನಗೆ ಇಷ್ಟವಾಯ್ತು. ಹೀಗಾಗಿ “ನಿಮ್ಮೆಲ್ಲರ ಆಶೀರ್ವಾದ’ ಸಿನಿಮಾ ಮಾಡಿದ್ದೇನೆ’ ಎಂದರು.

ನಿರ್ದೇಶಕ ರವಿಕಿರಣ್‌ ಮಾತನಾಡಿ, “ಇದೊಂದು ಸರಳ-ಸುಂದರ ಕಥೆ. ಪ್ರತಿಯೊಬ್ಬರಿಗೂ ಸಿನಿಮಾ ಇಷ್ಟಪಡಬೇಕು. ಅರ್ಥ ಮಾಡಿಕೊಳ್ಳಬೇಕು ಎಂಬ ರೀತಿಯಲ್ಲಿ ಸಿನಿಮಾ ಮಾಡಿದ್ದೇವೆ. ಇತ್ತೀಚಿನ ವರ್ಷಗಳಲ್ಲಿ ತುಂಬಾ ಜಾನರ್‌ಗಳ ಬಗ್ಗೆ ಯೋಚನೆ ಮಾಡುತ್ತಿದ್ದೆ. ಫ್ಯಾಮಿಲಿ ಡ್ರಾಮಾ ಸಿನಿಮಾಗಳಿವೆ. ಆದರೆ, ಮೊದಲಿನಿಂದ ಕೊನೆತನಕ ಸಿಂಪಲ್‌ ಆಗಿ ಎಂಟರ್‌ ಟೈನ್‌ ಮಾಡುವ ಸಿನಿಮಾಗಳು ಇತ್ತೀಚೆಗೆ ಕಡಿಮೆಯಾಗಿವೆ ಎಂದು ಈ ಕತೆ ಬರೆದಿದ್ದೇವೆ. ಈಗ ಸಿನಿಮಾ ರಿಲೀಸ್‌ ಹಂತದಲ್ಲಿದೆ. ಇಡೀ ಫ್ಯಾಮಿಲಿ ಕುಳಿತುಕೊಂಡು ನೋಡುವ ಚಿತ್ರ ಇದಾಗಿದ್ದು, ಇದೇ ಜುಲೈ 21ಕ್ಕೆ ತೆರೆಗೆ ಬರುತ್ತಿದೆ’ ಎಂದರು.

ಚಿತ್ರದಲ್ಲಿ ಪ್ರತೀಕ್ ಶೆಟ್ಟಿ ಮತ್ತು ಪಾಯಲ್ ರಾಧಾಕೃಷ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇವರೊಂದಿಗೆ ಎಂ. ಎನ್‌.ಲಕ್ಷ್ಮೀದೇವಿ, ಅರವಿಂದ ಬೋಳಾರ್‌, ಗೋವಿಂದೇಗೌಡ, ಸ್ವಾತಿ ಗುರುದತ್‌, ದಿನೇಶ್‌ ಮಂಗಳೂರು ಸೇರಿ ಹಲವರಿದ್ದಾರೆ.

Advertisement

ಚಿತ್ರಕ್ಕೆ ಸರವಣನ್‌ ಜಿ.ಎನ್‌ ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆ, ರೂಪೇಂದ್ರ ಆಚಾರ್‌ ಕಲಾ ನಿರ್ದೇಶನ, ಸುನಾದ್‌ ಗೌತಮ್‌ ಸಂಗೀತ ಮತ್ತು ವಿವೇಕ್‌ ಚಕ್ರವರ್ತಿ ಹಿನ್ನೆಲೆ ಸಂಗೀತ, ಸುರೇಶ್‌ ಆರುಮುಗಂ ಸಂಕಲನವಿದೆ.

Advertisement

Udayavani is now on Telegram. Click here to join our channel and stay updated with the latest news.

Next