Advertisement

ಸಿದ್ದರಾಮಯ್ಯಗೆ ಪ್ರತಾಪ್‌ ಸವಾಲು

11:10 AM Mar 26, 2019 | Team Udayavani |

ಮೈಸೂರು: ಐದು ಬಾರಿ ನಿಮ್ಮನ್ನು ಶಾಸಕರಾಗಿ ಆಯ್ಕೆ ಮಾಡಿದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾವ ಘನಂದಾರಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೀರಿ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‌ಸಿಂಹ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದರು.

Advertisement

ಸೋಮವಾರ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದರು ಏನು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿದ್ದರು.

ಹಾಗಾಗಿ ಅಗತ್ಯವಾದ ದಾಖಲೆಗಳೊಂದಿಗೆ ಬಹಿರಂಗವಾಗಿ ಚರ್ಚೆಗೆ ಬನ್ನಿ ಎಂದು ನಾವು ಆಹ್ವಾನ ನೀಡಿದರೂ, ಅವರು ಈವರೆಗೆ ಚರ್ಚೆಗೆ ಬಂದಿಲ್ಲ, ಧೈರ್ಯ ಇದ್ದರೆ ನಮ್ಮ ಸವಾಲನ್ನು ಸ್ವೀಕರಿಸಿ, ಬಹಿರಂಗ ಚರ್ಚೆಗೆ ಬನ್ನಿ ಎಂದು ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next