Advertisement

‘ಕೈ’ಹಿಡಿದ ರಸಿಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಕುಳಾಯಿ

11:49 AM Mar 13, 2018 | Team Udayavani |

ಮಂಗಳೂರು: ಶಾಸಕರ ನಿವಾಸದಲ್ಲಿ ಸಾರ್ವಜನಿಕವಾಗಿ ರಸಿಕತನ ತೋರಿದ ಕಾಂಗ್ರೆಸ್‌ ಮುಖಂಡನೊಬ್ಬನಿಗೆ ಮಹಿಳಾ ಕಾರ್ಪೋರೇಟರ್‌ ಹಿಗ್ಗಾಮುಗ್ಗಾ ಥಳಿಸಿದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. 

Advertisement

ಮಂಗಳೂರು ಉತ್ತರ ಶಾಸಕ ಮೊಯಿದ್ದೀನ್‌ ಬಾವಾ ಅವರ ಕಚೇರಿಯಲ್ಲಿ ಸೋಮವಾರ ಸಂಜೆ ಘಟನೆ ನಡೆದಿರುವುದಾಗಿ ವರದಿಯಾಗಿದ್ದು , ಕಾಂಗ್ರೆಸ್‌ ಕಾರ್ಯದರ್ಶಿ ಅಬ್ದುಲ್‌ ಸತ್ತಾರ್‌ ಎಂಬಾತ ಕಾರ್ಪೋರೇಟರ್‌ ಕೈ ಹಿಡಿದು ಥಳಿತಕ್ಕೊಳಗಾಗಿದ್ದಾನೆ ಎಂದು ತಿಳಿದು ಬಂದಿದೆ. 

ಪ್ರತಿಭಾ ಅವರು ಕೈ ಹಿಡಿದ ಕೂಡಲೇ ಕೆಂಡಮಂಡಲವಾಗಿದ್ದಾರೆ ಎನ್ನಲಾಗಿದ್ದು , ಸತ್ತಾರ್‌ಗೆ ಅಟ್ಟಾಡಿಸಿಕೊಂಡು ಮನೆಯಿಂದ ಹೊರಗೆಳೆದು ಥಳಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿಲ್ಲ. 

ಅಬ್ದುಲ್‌ ಸತ್ತಾರ್‌  ವಿರುದ್ಧ ಮಹಿಳೆಯರಿಗೆ ಕಿರುಕುಳ ನೀಡಿದ ಹಲವು ಆರೋಪಗಳಿದ್ದು, ಈ ಹಿಂದೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ ಕೈಯನ್ನೂ ಕಡಿದಿದ್ದರು ಎಂದು ಪ್ರತಿಭಾ ಆರೋಪ ಮಾಡಿದ್ದಾರೆ. 

ಏಳಿಗೆ ಸಹಿಸದೆ ಸುಳ್ಳು ಹೇಳುತ್ತಿದ್ದಾರೆ:

Advertisement

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿದ್ದು ಸುರತ್ಕಲ್ ಪರಿಸರದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ.ನನ್ನ ಏಳಿಗೆ ಸಹಿಸದ ನನ್ನ ವಿರೋಧಿಗಳು ನಾನು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದೇನೆ ಎಂದು ನನಗೆ ಧರ್ಮದೇಟು ನೀಡಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಸತ್ಯಕ್ಕೆ ದೂರವಾದ ಮಾತು. ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಯಾವಾಗಲೂ ನಾನು ಚಿರಋಣಿಯಾಗಿರುತ್ತೇನೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್ ಕೃಷ್ಣಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next