Advertisement

ಜಗದೀಶ್ ಅಧಿಕಾರಿಯ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂ. ನೀಡುತ್ತೇನೆ : ಪ್ರತಿಭಾ ಕುಳಾಯಿ ಘೋಷಣೆ

11:35 AM Feb 08, 2021 | Team Udayavani |

ಸುರತ್ಕಲ್: ಬಿಲ್ಲವರ ಆರಾಧ್ಯರಾದ ಕೋಟಿ ಚೆನ್ನಯರ ಬಗ್ಗೆ ಹಾಗೂ ಬಿಲ್ಲವ ಮುಖಂಡ ಜನಾರ್ಧನ ಪೂಜಾರಿ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ ಒಂದು ಲಕ್ಷ ರೂ. ಘೋಷಿಸಲಾಗಿದೆ!

Advertisement

ಇದನ್ನು ಘೋಷಿಸಿದವರು ಮಂಗಳೂರು ಪಾಲಿಕೆ ನಿಕಟಪೂರ್ವ ಕಾಂಗ್ರೆಸ್ ಸದಸ್ಯೆ ಪ್ರತಿಭಾ ಕುಳಾಯಿ. ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಅವರು ಈ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ:ತಪ್ಪು ಮಾಹಿತಿ ಹರಡುತ್ತಿರುವ ಖಲಿಸ್ತಾನಿ ಖಾತೆಗಳನ್ನು ತೆಗೆಯಿರಿ : ಟ್ವೀಟರ್ ಗೆ ಕೇಂದ್ರ ಮನವಿ

ಮೂರು ದಿನದ ಒಳಗಾಗಿ ಗರಡಿಗೆ ಆಗಮಿಸಿ ಜಗದೀಶ್ ಅಧಿಕಾರಿ ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ಬಿಲ್ಲವ ಸಮುದಾಯದ ಯಾರಾದರೂ ಪ್ರಥಮವಾಗಿ ಅವರ ಮುಖಕ್ಕೆ ಮಸಿ ಬಳಿಯಿರಿ. ಒಂದು ಲಕ್ಷ ರೂ. ನಗದು ಬಹುಮಾನ ನೀಡುತ್ತೇನೆ ಎಂದು ಪ್ರತಿಭಾ ಕುಳಾಯಿ ಹೇಳಿದ್ದಾರೆ.

ಸಂಘಟನೆಗೆ ಸೇರಿ, ಸಾಯಿರಿ ಎಂಬುದನ್ನು ಮತ್ತೆ ಹೇಳಿದ್ದಾರೆ. ಬಿಜೆಪಿಗಾಗಿ, ನಾಯಕರಿಗಾಗಿ ಜೈಲು ಸೇರುತ್ತೀರಿ ಆದರೆ ನಿಮ್ಮನ್ನು ಬಿಡಿಸಿಕೊಂಡು ಬರಲು ಯಾರೂ ಮುಂದೆ ಬರುತ್ತಿಲ್ಲ.ಇದನ್ನು ಪ್ರಶ್ನಿಸುವ ತಾಕತ್ತೂ ನಮ್ಮ ಯುವಕರಿಗಿಲ್ಲ ಎಂದು ಪ್ರತಿಭಾ ಕುಳಾಯಿ ಪುನರುಚ್ಚರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next