Advertisement

ಬೆಂಗಳೂರು: ಎಎಪಿ ರಾಜ್ಯಾಧ್ಯಕ್ಷರಾಗಿ ಪೃಥ್ವಿರೆಡ್ಡಿ, ನಗರಾಧ್ಯಕ್ಷರಾಗಿ ಮೋಹನ್ ದಾಸರಿ ಆಯ್ಕೆ

03:55 PM Jun 05, 2022 | Team Udayavani |

ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ಪುನರ್ ರಚನೆಯಾಗಿದ್ದು, ರಾಜ್ಯಾಧ್ಯಕ್ಷರಾಗಿ ಪೃಥ್ವಿರೆಡ್ಡಿ ಹಾಗೂ ನಗರಾಧ್ಯಕ್ಷರಾಗಿ ಮೋಹನ್ ದಾಸರಿ ಪುನರ್ ಆಯ್ಕೆಯಾಗಿದ್ದಾರೆ.

Advertisement

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ಅವರು ರಾಜ್ಯ ಪದಾಧಿಕಾರಿಗಳ ಪುನರ್ ರಚನೆ ಮಾಡಿದ್ದಾರೆ.

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ವಿಜಯ್ ಶರ್ಮಾ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಸಂಚಿತ್ ಸಹಾನಿ- ರಾಜ್ಯ ಪ್ರಧಾನ ಕಾರ್ಯದರ್ಶಿ, ಹರಿಹರನ್- ರಾಜ್ಯ ಖಜಾಂಚಿ, ಜಗದೀಶ್ ವಿ ಸದಂ- ರಾಜ್ಯ ಮಾಧ್ಯಮ ಉಸ್ತುವಾರಿ, ಕೆ. ಮಾಥಾಯ್ ರಾಜ್ಯ ವಕ್ತಾರರಾಗಿ ನೇಮಕಗೊಂಡಿದ್ದಾರೆ.

ಎಚ್.ಡಿ. ಬಸವರಾಜು- ರಾಜ್ಯ ಕಾರ್ಯದರ್ಶಿಗಳಾಗಿ ಡಾ. ವೆಂಕಟೇಶ್, ಬಿ.ಟಿ. ನಾಗಣ್ಣ, ಲಕ್ಷ್ಮೀಕಾಂತ್ ರಾವ್, ಶಾಂತಲಾ ದಾಮ್ಲೆ ನೇಮಕವಾಗಿದ್ದಾರೆ.

Advertisement

ರಾಜ್ಯ ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ದರ್ಶನ್ ಜೈನ್ ಹಾಗೂ ವಿವೇಕನಾಂದ ಸಾಲಿನ್ಸ್ ಅವರನ್ನು ನೇಮಿಸಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್​ : ಸಚಿವ ಸುನಿಲ್​ ಕುಮಾರ್

Advertisement

Udayavani is now on Telegram. Click here to join our channel and stay updated with the latest news.

Next