Advertisement
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಸರ್ಕಾರ ಕೃಷಿ ವಿರೋಧಿ ನೀತಿ ಕೈ ಬಿಟ್ಟು ರೈತರ ಪರವಾಗಿ ನಿಲ್ಲಲಿ ಎಂದು ಒತ್ತಾಯಿಸಿದರು.
Related Articles
Advertisement
ಪ್ರಧಾನಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ 10 ಸಾವಿರ ನೀಡುವ ಹಣವನ್ನು ಇನ್ನೂ ಹೆಚ್ಚಿಸಬೇಕು. ಸೊಪ್ಪಿನ ಬೆಟ್ಟ ಬಳಕೆಯ ಕುರಿತು ಸಿದ್ದರಾಮಯ್ಯ ಅವರ ಸರ್ಕಾರ ಇದ್ದಾಗ ಹಲವು ಸೌಲಭ್ಯವನ್ನು ರೈತರಿಗೆ ನೀಡಿದೆ. ಬೆಟ್ಟ ಪ್ರದೇಶದಲ್ಲಿ ಬೆಳೆದ ಬೆಳೆಯಲ್ಲಿ ಶೆ.25 ಸರ್ಕಾರಕ್ಕೆ ಮತ್ತು ಶೆ. 75 ರೈತರಿಗೆ ಎಂಬ ಕಾನುನು ಜಾರಿ ಗೊಳಿಸಿದೆ. ಇದು ರೈತರಿಗೆ ವರಮಾನ ವಾಹಕದ. ಈಗಿನ ರಾಜ್ಯ ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಸೊಪ್ಪಿನ ಬೆಟ್ಟದ ಭುಮಿಯ ಹಕ್ಕನ್ನು ರೈತರಿಗೆ ನೀಡಬೇಕು. ತೋಟಗಾರಿಕೆ ಇಲಾಖೆಯ ಹಾರ್ಟಿಕ್ಲಿನಿಕ್ ಗೂ ಅನುದಾನ ನೀಡುವಿಕೆಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದ್ದು, ಇದರಿಂದಾಗಿ ರೈತರಿಗೆ ಸೂಕ್ತ ಸಮಯದಲ್ಲಿ ಮಾಹಿತಿ ಸಿಗದಂತಾಗಿದೆ. ಕಳೆದ ಎರಡು ವರ್ಷಗಳಿಂದ ಕೃಷಿ ಹೊಂಡ ನಿರ್ಮಾಣಕ್ಕೂ ರಾಜ್ಯ ಸರ್ಕಾರ ಹಣ ಮಂಜೂರು ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ದೀಪಕ ದೊಡ್ಡೂರು, ಜಗದೀಶ ಗೌಡ ಇತರರು ಇದ್ದರು.