Advertisement

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ವಿದೇಶದಲ್ಲಿ ಅಡಗಿರುವ ಆರೋಪಿಗಳ‌ ಸುಳಿವು ಪತ್ತೆ

01:16 AM Jan 29, 2023 | Team Udayavani |

ಪುತ್ತೂರು: ಪ್ರವೀಣ್‌ ನೆಟ್ಟಾರು ಹಂತಕರಿಗೆ ನೆರವು ನೀಡಿದ ಆರೋಪಿಗಳು ವಿದೇಶದಲ್ಲಿ ಅಡಗಿರುವ ಬಗ್ಗೆ ಎನ್‌ಐಎಗೆ ಸುಳಿವು ದೊರೆತಿದ್ದು, ಇಬ್ಬರನ್ನು ವಶಕ್ಕೆ ಪಡೆದು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎನ್ನುವ ಮಾಹಿತಿ ಲಭಿಸಿದೆ.

Advertisement

ನಿಷೇಧಿತ ಪಿಎಫ್‌ಐ ಸದಸ್ಯರಾಗಿ ರುವ ಮೊಹಮ್ಮದ್‌ ಮುಸ್ತಫಾ ಎಸ್‌., ತುಫೈಲ್‌ ಎಂ.ಎಚ್‌. ಪತ್ತೆಗೆ ತಲಾ 5 ಲಕ್ಷ ರೂ. ಹಾಗೂ ಉಮ್ಮರ್‌ ಫಾರೂಕ್‌, ಅಬೂಬಕ್ಕರ್‌ ಸಿದ್ಧೀಕ್‌ ಪತ್ತೆಗೆ ತಲಾ 2 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ಶರೀಫ್‌ ಹಾಗೂ ಕೆ.ಎ. ಮಸೂದ್‌ ಪತ್ತೆಗೆ ತಲಾ 10 ಲಕ್ಷ ರೂ. ಘೋಷಿಸಲಾಗಿತ್ತು.

ವಿದೇಶಕ್ಕೆ ಪರಾರಿ
6 ಮಂದಿಯ ಪೈಕಿ ಐವರನ್ನು ಈಗಾಗಲೇ ಎನ್‌ಐಎ ತನ್ನ ವಶಕ್ಕೆ ಪಡೆದಿದೆ ಎನ್ನುವ ಮಾಹಿತಿ ಲಭಿಸಿದೆ. ಈ ಆರೋಪಿಗಳ ಪತ್ತೆ ದೇಶದೊಳಗೆಯೇ ಅಥವಾ ವಿದೇಶದಲ್ಲಿಯೇ ಎನ್ನುವ ಖಚಿತ ಮಾಹಿತಿ ಲಭಿಸಿಲ್ಲ. ಇನ್ನು ಇಬ್ಬರು ಆರೋಪಿಗಳಾದ ಶರೀಫ್‌ ಹಾಗೂ ಕೆ.ಎ. ಮಸೂದ್‌ ಸೌದಿಯಲ್ಲಿ ಅಡಗಿರುವ ಸುಳಿವು ಸಿಕ್ಕಿದ್ದು ಅವರ ಪತ್ತೆಗೆ ಕಾರ್ಯಾಚರಣೆ ನಡೆಸ ಲಾಗುತ್ತಿದೆ. ಇನ್ನೋರ್ವ ಆರೋಪಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next