Advertisement

Praveen Nettaru Case ಸಹೋದರಿಯ ಮದುವೆಗೆ ಪೆರೋಲ್‌ನಲ್ಲಿ ಬಂದ ಆರೋಪಿ

11:50 PM Dec 02, 2023 | Team Udayavani |

ಸುಳ್ಯ: ಬಿಜೆಪಿ ಯುವ ಮೋರ್ಚಾ ನಾಯಕ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಓರ್ವ ಆರೋಪಿಗೆ 2 ದಿನಗಳ ಜಾಮೀನು (ಪೆರೋಲ್‌) ಸಿಕ್ಕಿದೆ ಎಂದು ತಿಳಿದು ಬಂದಿದೆ.

Advertisement

ಸುಳ್ಯ ಮೂಲದ ಇಬ್ರಾಹಿಂ ಶಾ ನಾವೂರು ಎಂಬಾತನನ್ನು ಪ್ರವೀಣ್‌ ಹತ್ಯೆ ಪ್ರಕರಣದಲ್ಲಿ 15ನೇ ಆರೋಪಿಯಾಗಿ ಪೊಲೀಸರು ಬಂಧಿಸಿದ್ದರು. ಸುಳ್ಯದಲ್ಲಿ ಆತನ ತಂಗಿಯ ಮದುವೆ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗಿತ್ತು.

ಶನಿವಾರ ಬೆಳಗ್ಗೆ ಮೈಸೂರಿನ ಜೈಲಿನಿಂದ ಪೊಲೀಸ್‌ ಭದ್ರತೆಯಲ್ಲಿ ವಿವಾಹ ಸಮಾರಂಭದ ಸ್ಥಳಕ್ಕೆ ಕರೆತರಲಾಗಿತ್ತು. ಜಾಮೀನು ಅವಧಿ ಮುಗಿದ ಬಳಿಕ ಮತ್ತೆ ಮೈಸೂರಿನ ಜೈಲಿಗೆ ಸೇರಿಸಲಾಗಿದೆ.

2022ರ ಜುಲೈ 26ರಂದು ಬೆಳ್ಳಾರೆಯಲ್ಲಿ ಪ್ರವೀಣ್‌ ಅವರ ಕೋಳಿ ಅಂಗಡಿಯ ಎದುರೇ ದುಷ್ಕರ್ಮಿಗಳು ಅವರ ಮೇಲೆ ಎರಗಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ಹಲವರನ್ನು ಬಂಧಿಸಿತ್ತು. ಈಗಲೂ ಕೆಲವು ಆರೋಪಿಗಳಿಗಾಗಿ ಎನ್‌ಐಎ ಶೋಧ ನಡೆಸುತ್ತಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next