Advertisement

ಡ್ರಗ್ ಮಾಫಿಯಾ ಮಟ್ಟಹಾಕಿ, ಕರ್ನಾಟಕವನ್ನು ನಶೆ ಮುಕ್ತ ಮಾಡಲು ಕ್ರಮ: ಪ್ರವೀಣ್ ಸೂದ್

05:53 PM Sep 03, 2020 | sudhir |

ವಿಜಯಪುರ : ರಾಜ್ಯದಲ್ಲಿ ಡ್ರಗ್ ಮಾಫಿಯಾ ಹರಡಿರುವುದನ್ನು ಶೀಘ್ರವೇ ಮಟ್ಟಹಾಕಿ, ಕರ್ನಾಟಕವನ್ನು ನಶೆ ಮುಕ್ತ ಮಾಡುವುದಾಗಿ ಡಿಜಿ-ಐಜಿಪಿ ಪ್ರವೀಣ್ ಸೂದ್ ಹೇಳಿದರು.

Advertisement

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಬೆಂಗಳೂರು ನಗರ ಸೇರಿದಂತೆ ರಾಜ್ಯದೆಲ್ಲೆಡೆ ಮಾದಕ ವಸ್ತು ಸಾಗಾಟ, ಮಾರಾಟ ತಡೆಗಾಗಿ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಹಲವೆಡೆ ದಾಳಿ ನಡೆಸಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಹೊರತಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಐಜಿಪಿ ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳ ಎಸ್.ಪಿ ಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ ಡ್ರಗ್ ಮಾಫಿಯಾ ಬಗ್ಗೆ ಕಾರ್ಯಾಚರಣೆ ನಡೆಯುತ್ತಿದೆ, ನಡೆಯುತ್ತಲೇ ಇರುತ್ತದೆ. ಮಹಾರಾಷ್ಟ್ರ, ಆಂಧ್ರಪ್ರದೇಶದ, ತೆಲಂಗಾಣ ರಾಜ್ಯಗಳಿಗೆ ಕರ್ನಾಟಕ ರಾಜ್ಯದ ಜಿಲ್ಲೆಗಳು ಹೊಂದಿಕೊಂಡಿದ್ದು,. ಯಾವುದೇ ರಾಜ್ಯ – ಜಿಲ್ಲೆಗಳ ಗಡಿಗೆ ಹೊಂದಿಕೊಂಡಿದ್ದರ ಗಡಿ ರಾಜ್ಯ- ಜಿಲ್ಲೆಗಳಿಂದ ಮಾದಕ ವಸ್ತುಗಳು ಒಳ ಬಾರದಂತೆ ಹತೋಟಿಗೆ ತರುವ ಕುರಿತು ಚರ್ಚಿಸಲಾಗಿದೆ ಎಂದರು.

ಈ ವಿಷಯದಲ್ಲಿ ಪೊಲೀಸ್ ಕಾರ್ಯಾಚರಣೆಗಳ ಬಗ್ಗೆ ತಮಗೆ ಶೀಘ್ರದಲ್ಲೇ ಉತ್ತಮ ಫಲಿತಾಂಶ ಸಿಗಲಿದೆ. ಮಾದಕ ವಸ್ತುಗಳನ್ನು ಪತ್ತೆಹಚ್ಚುವ, ತಡೆಗಟ್ಟುವ ಕೆಲಸ ಮಾಡುತ್ತಲೇ ಇದ್ದೇವೆ. ರಾಜ್ಯದಿಂದ ಆದಷ್ಟು ಬೇಗ ಮಾದಕ ವಸ್ತು ಸಂಪೂರ್ಣ ನಿಗ್ರಹಿಸಲಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next