Advertisement

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

09:51 PM Sep 18, 2024 | Team Udayavani |

ದೊಡ್ಡಬಳ್ಳಾಪುರ: ಮಳೆಗಾಗಿ ಕಪ್ಪೆ, ಕತ್ತೆಗಳ ಮದುವೆ ಮಾಡುವುದು ಸಾಮಾನ್ಯ. ಆದರೆ ತಾಲೂಕಿನ ಸಾಸಲು ಹೋಬಳಿ ಆರೂಢಿ ಗ್ರಾ.ಪಂ. ವ್ಯಾಪ್ತಿಯ ಪಚ್ಚಾರಲಹಳ್ಳಿಯಲ್ಲಿ ಇತ್ತೀಚೆಗೆ ಮಕ್ಕಳಿಗೆ ಮದುವೆ ಮಾಡಿ ಮಳೆಗಾಗಿ ಪ್ರಾರ್ಥಿಸಿರುವುದು ಬೆಳಕಿಗೆ ಬಂದಿದೆ.

Advertisement

ಹುಡುಗನಿಗೆ ಪೇಟಾ, ಬಾಸಿಂಗ ಕಟ್ಟಿ, ಬಾಲಕನಿಗೆ ಹೆಣ್ಣಿನ ವೇಷ ಹಾಕಿಸಿ ರೇಷ್ಮೆ ಸೀರೆ ಉಡಿಸಿ ಅಲಂಕಾರ ಮಾಡಿ ಶಾಸ್ತ್ರೋಕ್ತವಾಗಿ ಗ್ರಾಮಸ್ಥರೇ ಮದುವೆ ಮಾಡಿಸಿ, ಮಳೆಗಾಗಿ ಪ್ರಾರ್ಥಿಸಿದ್ದಾರೆ.

ಈ ರೀತಿ ಮಕ್ಕಳ ಮದುವೆ ಮಾಡಿದರೆ ಮಳೆಯಾಗುತ್ತದೆ ಎಂಬುದು ಈ ಗ್ರಾಮದ ಜನರ ನಂಬಿಕೆ ಎನ್ನುತ್ತಾರೆ ಗ್ರಾ.ಪಂ. ಸದಸ್ಯೆ ನಾಗರತ್ನಾ ರಮೇಶ್‌.

Advertisement

Udayavani is now on Telegram. Click here to join our channel and stay updated with the latest news.

Next