Advertisement

ಅವಧಿ ಪೂರ್ವ ಚುನಾವಣೆ ಅಸಾಧ್ಯ: ಶಾಸಕ ಬಸನಗೌಡ ಪಾಟೀಲ ಯತ್ನಾಳ್‌

11:31 PM Mar 13, 2022 | Team Udayavani |

ವಿಜಯಪುರ : ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಸಾಧ್ಯವೇ ಇಲ್ಲ. ಚುನಾವಣೆ ಒಂದು ವರ್ಷ ಇರುವುದರಿಂದ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ. ಪಕ್ಷದ ಹಿರಿಯರಿಗೆ ಹಾಗೂ ಯುವಕರಿಗೆ ಸಂಪುಟದಲ್ಲಿ ಅವಕಾಶ ನೀಡಲಾಗುತ್ತದೆ. ಆದರೆ ನನಗೆ ಮಂತ್ರಿ ಮಾಡಿ ಎಂದು ಯಾರನ್ನೂ ಕೇಳಿಲ್ಲ. ಪಕ್ಷದ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕಾಂಗ್ರೆಸ್‌ನ ಸೋನಿಯಾ, ರಾಹುಲ್‌, ಪ್ರಿಯಾಂಕಾ ಅವರೇ ಬಿಜೆಪಿ ಸ್ಟಾರ್‌ ಪ್ರಚಾರಕರು. ಸುಮ್ಮನೇ ರಾಜೀನಾಮೆ ನೀಡುವ ಹಾಗೂ ಆತ್ಮಾವಲೋಕನ ಸಭೆ ನಡೆಸುವ ನಾಟಕ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್‌ ಬಿಜೆಪಿಯನ್ನು ಬ್ರೋಕರ್‌ ಪಾರ್ಟಿ ಅಂತ ಕರೆದಿದ್ದಾರೆ. ಕಾಂಗ್ರೆಸ್‌ ಲೋಫರ್‌ ಪಾರ್ಟಿಯಾಗಿದೆ. ಜೈಲಿಗೆ ಹೋಗಿ ಬಂದವರು ನಮ್ಮ ಪಕ್ಷವನ್ನು ಟೀಕಿಸುವ ಯಾವ ನೈತಿಕತೆಯೂ ಹೊಂದಿಲ್ಲ. ಜನ ಬಿಜೆಪಿಗೆ ಅಭೂತ ಪೂರ್ವ ಬೆಂಬಲ ನೀಡಿದ್ದಾರೆ.

ಮತದಾರರ ನಿರ್ಧಾರವನ್ನು ಸ್ವೀಕರಿಸಬೇಕು. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಬಿಜೆಪಿಯಲ್ಲಿ ಈಗ ಸೆಕೆಂಡ್‌ ಲೈನ್‌ ಲೀಡರಶೀಪ್‌ ಬಂದಿದೆ. ಮುಂಬರುವ ಚುನಾವಣೆಯಲ್ಲಿ ಎಲ್ಲರೂ ಸೇರಿ 130 ಸ್ಥಾನಗಳ ಗಡಿ ದಾಟಿಸುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next