Advertisement
ಇಳಿಯದ ತಾಪಮಾನ
ಕರಾವಳಿ ಪ್ರದೇಶದಲ್ಲಿ ಮಳೆ ಬಂದರೂ ತಾಪಮಾನದಲ್ಲಿ ಇಳಿಕೆ ಆಗಿಲ್ಲ; ಬದಲಾಗಿ ವಾತಾವರಣದಲ್ಲಿ ತೇವಾಂಶ ಹೆಚ್ಚಿ ಸೆಕೆ ಜಾಸ್ತಿ ಅನುಭವಕ್ಕೆ ಬರುತ್ತಿದೆ. ಕೆಎಸ್ಎನ್ಡಿಎಂಸಿ ವಿಜ್ಞಾನಿ ಗವಾಸ್ಕರ್ ಅವರು ‘ಉದಯವಾಣಿ’ಗೆ ಪ್ರತಿಕ್ರಿಯೆ ನೀಡಿ, ಕರಾವಳಿ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಬೆಳಗ್ಗಿನಿಂದ ಮಧ್ಯಾಹ್ನದ ಸಮಯದಲ್ಲಿ ತಾಪಮಾನದಲ್ಲಿ ಹೆಚ್ಚಳವಾಗಲಿದೆ. ಹಿಂದಿನ ವರ್ಷ ಈ ಸಮಯದಲ್ಲಿ 38 ಡಿಗ್ರಿ ಸೆ. ಉಷ್ಣಾಂಶ ದಾಖಲಾಗಿತ್ತು. ಆದರೆ ಸದ್ಯ 37 ಡಿಗ್ರಿ ಸೆ. ಇದ್ದು, ಮುಂದಿನ ದಿನಗಳಲ್ಲಿ ಇನ್ನೂ ಎರಡು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದು ತಿಳಿಸಿದ್ದಾರೆ. ಹವಾಮಾನ ಇಲಾಖೆ ಅಂಕಿಅಂಶದ ಪ್ರಕಾರ ಮಂಗಳೂರು ನಗರದಲ್ಲಿ 1985ರ ಮಾ. 13ರಂದು 39.8 ಡಿಗ್ರಿ ಸೆ. ಉಷ್ಣಾಂಶ ದಾಖಲಾಗಿತ್ತು.
ಹವಾಮಾನ ಇಲಾಖೆಯ ನಿರ್ದೇಶಕ ಡಾ| ಶ್ರೀನಿವಾಸ ರೆಡ್ಡಿ ಉದಯವಾಣಿಗೆ ಪ್ರತಿಕ್ರಿಯೆ ನೀಡಿ ‘ಹವಾಮಾನ ಇಲಾಖೆಯ ಲೆಕ್ಕಾಚಾರದ ಪ್ರಕಾರ ಈ ಬಾರಿ ಕರಾವಳಿ ಪ್ರದೇಶದಲ್ಲಿ ಮುಂಗಾರು ಉತ್ತಮವಾಗಲಿದೆ. ಈ ಬಾರಿ ವಾಡಿಕೆಯಂತೆ ಮಳೆಯಾಗಲಿದ್ದು, ಮೇ ಕೊನೆಯ ವಾರ ಅಥವಾ ಜೂನ್ 2ರ ಒಳಗೆ ಮುಂಗಾರು ಕರ್ನಾಟಕದ ಕರಾವಳಿ ಕಡೆಗೆ ಅಪ್ಪಳಿಸಲಿದೆ ಎಂದು ತಿಳಿಸಿದ್ದಾರೆ. — ನವೀನ್ ಭಟ್ ಇಳಂತಿಲ