Advertisement

ಕೋವಿಡ್ ಗೆ ಮುನ್ನೆಚ್ಚರಿಕೆಯೇ ಮದ್ದು

09:54 AM Jul 19, 2020 | Suhan S |

ಗುಂಡ್ಲುಪೇಟೆ: ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರು ಆದಷ್ಟು ಜಾಗತ್ರೆಯಿಂದ ಇರಬೇಕು ಎಂದು ಶಾಸಕ ನಿರಂಜನಕುಮಾರ್‌ ಅವರು ಹೇಳಿದರು.

Advertisement

ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿನ ಸಿದ್ದಪ್ಪಾಜಿ ದೇವಸ್ಥಾನ ಅಭಿವೃದ್ಧಿ ವಿಚಾರವಾಗಿ ಮುಖಂಡರೊಂದಿಗೆ ಚರ್ಚಿಸಿದರು. ಕೋವಿಡ್ ಬಗ್ಗೆ ಭೀತಿ ಬೇಡ. ಸಮರ್ಪಕ ಮುನ್ನೆಚ್ಚರಿಕೆ, ಅನಗತ್ಯವಾಗಿ ಮನೆಯಿಂದ ಹೊರ ಬರದಿರುವುದು, ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಸೋಂಕಿನಿಂದ ದೂರವಿರಲು ಸಾಧ್ಯವಿದ್ದು, ತಾಲೂಕು ಆಡಳಿತದೊಂದಿಗೆ ಸಹಕಾರ ನೀಡ ಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸೀಲ್‌ಡೌನ್‌ ಪ್ರದೇಶದ ಜನತೆಗೆ ಅನುಕೂಲವಾಗುವಂತೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಆಯಾ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹಂಗಳ ಪ್ರಣಯ್‌, ಮಲ್ಲಿಕಾರ್ಜುನ್‌, ಮಂಜುನಾಥ್‌, ಬಸವಣ್ಣ, ದೇವಯ್ಯ, ನಂದೀಶ್‌, ವಿವಿಧ ಘಟಕಗಳ ಪದಾಧಿಕಾರಿಗಳು ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next