Advertisement

ದೇವೇಗೌಡ ಭೇಟಿ ವಿವಾದ: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಶಾಸಕ ಪ್ರೀತಂ ಗೌಡ

01:58 PM Aug 10, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿ ದೇವೇ ಗೌಡರನ್ನು ಭೇಟಿಯಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಹಾಸನ ಶಾಸಕ ಪ್ರೀತಂ ಗೌಡ ಇಂದು ಮುಖ್ಯಮಂತ್ರಿಗಳನ್ನು ಭೇಟಿಯಾದರು.

Advertisement

ಅಧಿಕಾರ ಸ್ವೀಕರಿಸದ ಬಳಿಕ ಸಿಎಂ ಬೊಮ್ಮಾಯಿ ಅವರು ದೇವೇಗೌಡರನ್ನು ಭೇಟಿ ಮಾಡಿದ್ದಕ್ಕೆ ಪ್ರೀತಂ ಗೌಡ ಆಕ್ಷೇಪ ವ್ಯಕ್ತಪಡಿಸಿದ್ದರು. ಇದು ರಾಜಕೀಯವಾಗಿ ಹಲವು ಹೇಳಿಕೆಗಳಿಗೆ ಕಾರಣವಾಗಿತ್ತು. ಇದೀಗ ಸ್ವತಃ ಬೊಮ್ಮಾಯಿ ಅವರು ಪ್ರೀತಂಗೌಡರನ್ನು ಕರೆಸಿಕೊಂಡಿದ್ದಾರೆ.

ಇದನ್ನೂ ಓದಿ:ದೀನದಯಾಳ್ ಉಪಾಧ್ಯಾಯ, ಸಾವರ್ಕರ್, ಶ್ಯಾಂಪ್ರಸಾದ ಮುಖರ್ಜಿ ಬ್ರಿಟಿಷರ ಏಜೆಂಟ್ ಗಳು:ಹರಿಪ್ರಸಾದ್

ಪ್ರೀತಂ ಗೌಡ ಮೊದಲ ಬಾರಿಗೆ ಚುನಾಯಿತರಾಗಿದ್ದಾರೆ. ತಿಳುವಳಿಕೆ ಕೊರತೆ ಇರುತ್ತದೆ. ನನಗೆ ಅವರು ಯುವ ಗೆಳೆಯ. ಅವರನ್ನ ಕರೆದು ಮಾತನ್ನಾಡುತ್ತೇನೆ. ಎಲ್ಲವನ್ನೂ ಸರಿಪಡಿಸಿಕೊಂಡು ಹೋಗುವ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಾಯಿ ಇಂದು ಬೆಳಗ್ಗೆ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next