Advertisement
2021-22ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ 77.00 ಲಕ್ಷ ಹೆಕ್ಟೇರ್ ಕೃಷಿ ಬೆಳೆಗಳ ಬಿತ್ತನೆ ಗುರಿ ಹೊಂದಲಾಗಿದ್ದು, ಆ. 30ರ ವರೆಗೂ 73.43 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆಯಾಗಿದೆ. ಅಂದರೆ ಸರಕಾರದ ಗುರಿ ಶೇ. 95.36 ಸಾಧಿಸಲಾಗಿದೆ. 2020-21ರ ಮುಂಗಾರು ಹಂಗಾಮಿನಲ್ಲಿ ಈ ಅವಧಿಯಲ್ಲಿ 72.27 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆಯಾಗಿದೆ.
Related Articles
Advertisement
ಪ್ರವಾಹಕ್ಕೆ ಬೆಳೆ ನಾಶ : ಈ ವರ್ಷ ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಹಾಗೂ ಮಲೆ ನಾಡು, ಕರಾವಳಿ ಭಾಗದಲ್ಲಿ ಉಂಟಾದಪ್ರವಾಹದಿಂದ ಸುಮಾರು 2,16,116.36 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಆದರೂ. ನಿರೀಕ್ಷಿತ ಆಹಾರ ಉತ್ಪಾದನೆ ಗುರಿ ಮುಟ್ಟುವ ವಿಶ್ವಾಸದಲ್ಲಿ ಕೃಷಿ ಇಲಾಖೆ ಇದೆ.
3.06 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆ :
ರಾಜ್ಯದಲ್ಲಿ ಕೃಷಿ ಚಟುವಟಿಕೆಗಳ ದೃಷ್ಟಿಯಿಂದ ಎಪ್ರಿಲ್, ಮೇನಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಚಾಮರಾಜನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ತುಮಕೂರು ಮತ್ತು ಚಿತ್ರದುರ್ಗ, ಹಾಸನ ಜಿÇÉೆಗಳ ಕೆಲವು ಭಾಗಗಳಲ್ಲಿ ಭೂ ಸಿದ್ಧತೆ ಹಾಗೂ ಜೋಳ, ಹೆಸರು, ಉದ್ದು, ಅಲಸಂದೆ, ಎಳ್ಳು, ಸೂರ್ಯಕಾಂತಿ, ಹತ್ತಿ, ತಂಬಾಕು ಬೆಳೆಗಳ ಬಿತ್ತನೆ ಗುರಿ 2.58 ಲಕ್ಷ ಹೆಕ್ಟೇರ್ಗೆ ಪ್ರತಿಯಾಗಿ 3.06 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆಯಾಗಿದೆ.