Advertisement

ಮೂಲ ಸೌಕರ್ಯಗಳಿಗೆ ಆದ್ಯತೆ

09:39 AM Mar 06, 2019 | Team Udayavani |

ಸುರಪುರ: ನೀರು ಶೌಚಾಲಯ ಸೇರಿದಂತೆ ನಗರದ ಜನತೆಗೆ ಮೂಲ ಸೌಕರ್ಯ ಒದಗಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅನುಷ್ಠಾನ ಅಧಿಕಾರಿಗಳು ಕೈ ಜೋಡಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇ ಎಂದು ಶಾಸಕ ರಾಜುಗೌಡ ಹೇಳಿದರು.

Advertisement

ನಗರದಲ್ಲಿ ಸೋಮವಾರ ವಿವಿಧ ವಾರ್ಡಗಳಲ್ಲಿ 1 ಕೋಟಿ ವೆಚ್ಚದ 6 ನೂತನ ಕುಡಿಯುವ ಶುದ್ಧ ನೀರು ಘಟಕಗಳ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಬೇಸಿಗೆ ಆರಂಭವಾಗಿದೆ. ನದಿಯಲ್ಲಿ ಸರಿಯಾಗಿ ನೀರಿಲ್ಲ. ಇರುವಷ್ಟು ನೀರನ್ನು ನಗರಸಭೆಯವರು ಸಮರ್ಪಕವಾಗಿ ಸರಬರಾಜು ಮಾಡುತ್ತಿಲ್ಲ. ಹೀಗಾಗಿ ಜನತೆ ನೀರಿಗಾಗಿ ತತ್ತರಿಸುತ್ತಿದ್ದಾರೆ. ಜನರ ತಾಳ್ಮೆ ಪರೀಕ್ಷಿಸ ಬೇಡಿ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆ ಇಂಜಿನಿಯರ್‌ ಹಣಮಂತಪ್ಪ ಅಂಬ್ಲಿ ಅವರಿಗೆ ಕಡಕ್ಕಾಗಿ ಎಚ್ಚರಿಕೆ ನೀಡಿದರು.

ನಗರದ ಜನತೆಗೆ ಶುದ್ಧ ನೀರು ಕೊಡಬೇಕು ಎನುವ ಉದ್ದೇಶದಿಂದ ಸಾಕಷ್ಟು ಪ್ರಯತ್ನ ಪಟ್ಟು ಅನುದಾನ ತಂದಿದ್ದೇನೆ. ಇದನ್ನು ವ್ಯರ್ಥ ಆಗಲಿಕ್ಕೆ ಬಿಡುವುದಿಲ್ಲ ಎಂದು ತಾಕೀತು ಮಾಡಿದರು.
 
ಇಲಾಖೆ ಎಇಇ ಹಣಮಂತಪ್ಪ ಅಂಬಲಿ ಮಾತನಾಡಿ, ಮುಂಜುಮದಾರಗಲ್ಲಿ ಕುಂಬಾರ ಪೇಟ. ಕೆಂಗೂರಿ ವೃತ್ತ, ತರಕಾರಿ ಮಾರುಕಟ್ಟೆ, ತಿಮ್ಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಹತ್ತಿರ ರಂಗಂಪೇಟ ತರಕಾರಿ ಮಾರುಕಟ್ಟೆ 6 ಕಡೆ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಾಹಿತಿ ನೀಡಿದರು. 

ನಗರಸಭೆ ಪೌರಾಯುಕ್ತ ಏಜಾಜ್‌ ಹುಸೇನ್‌, ತಾಪಂ ಅಧ್ಯಕ್ಷೆ ಅನುಸೂಬಾಯಿ ತಿರುಪತಿ ಚವ್ಹಾಣ, ಯಲ್ಲಪ್ಪ ಕುರುಕುಂದಿ, ಹನುಮಪ್ಪ ನಾಯಕ ತಾತಾ, ವೇಣುಮಾಧವ ನಾಯಕ ಮರಿಲಿಂಗಪ್ಪ ನಾಯಕ ಕರ್ನಾಳ, ಗ್ಯಾನಚಂದ ಜೈನ್‌, ಎಚ್‌.ಸಿ. ಪಾಟೀಲ, ದುರ್ಗಪ್ಪ ಗೋಗಿಕೇರಾ, ವಿಷ್ಣು ಗುತ್ತೇದಾರ್‌, ನರಸಿಂಹಕಾಂತ ಪಂಚಮಗಿರಿ, ಶಿವಕುಮಾರ ಕಟ್ಟಿಮನಿ, ಅಯ್ಯಣ್ಣ ಪೂಜಾರಿ, ಶಂಕರ ನಾಯಕ, ವಿರೂಪಾಕ್ಷಿ ಕರ್ನಾಳ, ಈಶ್ವರ ನಾಯಕ, ಶ್ರೀನಿವಾಸ ದರಬಾರಿ, ಬಸವರಾಜ ಕೊಡೇಕಲ್‌, ಮಲ್ಲೇಶಿ ಪಾಟೀಲ ನಾಗರಾಳ, ಭೀಮಾಶಂಕರ ಬಿಲ್ಲವ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next