Advertisement

ಕ್ರೈಂ ಕಡಿವಾಣಕ್ಕೆ ಆದ್ಯತೆ

01:14 PM Sep 22, 2018 | Team Udayavani |

ಬೆಂಗಳೂರು: ರಾಜಧಾನಿಯಲ್ಲಿ ಸಂಘಟಿತ ಅಪರಾಧಗಳ ಮಾಫಿಯಾಗೆ ಕಡಿವಾಣ ಹಾಕುವುದನ್ನು ಪ್ರಮುಖ ಆದ್ಯತೆಯಾಗಿ ಪರಿಗಣಿಸಿ ಕಾರ್ಯನಿರ್ವಹಿಸುತ್ತೇನೆ ಎಂದು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಹೆಚ್ಚುವರಿ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.

Advertisement

ಸಿಸಿಬಿ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಪೊಲೀಸ್‌ ಆಯುಕ್ತರು ಸೇರಿ ಉನ್ನತ ಅಧಿಕಾರಿಗಳ ಸಹಕಾರ, ಮಾರ್ಗದರ್ಶನದಲ್ಲಿ ನಗರದಲ್ಲಿ ಸಂಘಟಿತ ಅಪರಾಧ ಕೃತ್ಯಗಳ ಕಡಿವಾಣಕ್ಕೆ ಕಾರ್ಯನಿರ್ವಹಿಸಲಾಗುವುದು.

ನಗರದಲ್ಲಿ ಸಾರ್ವಜನಿಕರನ್ನು ಬೆದರಿಸುವುದು, ವೈಟ್‌ ಕಾಲರ್‌ ಕ್ರೈಂ, ಸಾರ್ವಜನಿಕರಿಗೆ ಕಿರುಕುಳ, ರಿಯಲ್‌ ಎಸ್ಟೇಟ್‌ ಮಾಫಿಯಾಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದರು.

ಸಿಸಿಬಿಯಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆ ವಿಳಂಬದ ಬಗ್ಗೆ ಅಧಿಕಾರಿಗಳು, ಸಿಬ್ಬಂದಿ ಜತೆ ಸಭೆ ನಡೆಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಅಲೋಕ್‌ ಕುಮಾರ್‌ ಹೇಳಿದರು. ಅಧಿಕಾರ ಸ್ವೀಕರಿಸಿದ ಬಳಿಕ ನಗರ ಪೊಲಿಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ಅವರನ್ನು ಭೇಟಿ ಮಾಡಿದ ಅಲೋಕ್‌ ಕುಮಾರ್‌, ಔಪಚಾರಿಕ ಮಾತುಕತೆ ನಡೆಸಿದರು. ಸಿಸಿಬಿ ಡಿಸಿಪಿ ಗಿರೀಶ್‌ ಜತೆಗೂ ಚರ್ಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next